ಮಕ್ಕಳ ಮೃತದೇಹದೊಂದಿಗೆ ಪೊಲೀಸರ ಚಿತ್ರ 
ದೇಶ

ದೆಹಲಿ: ನಾಪತ್ತೆಯಾಗಿದ್ದ ಇಬ್ಬರು ಮಕ್ಕಳ ಶವ ಮರದ ಪೆಟ್ಟಿಗೆಯಲ್ಲಿ ಪತ್ತೆ, ತನಿಖೆ

ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಜಾಮಿಯಾ ನಗರದ ಕಾರ್ಖಾನೆಯೊಂದರಲ್ಲಿ ಮರದ ಪೆಟ್ಟಿಗೆಯಲ್ಲಿ ಏಳು ಮತ್ತು ಎಂಟು ವರ್ಷದೊಳಗಿನ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿವೆ. ಇವರು ಜೂನ್ 5 ರಿಂದ ನಾಪತ್ತೆಯಾಗಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಜಾಮಿಯಾ ನಗರದ ಕಾರ್ಖಾನೆಯೊಂದರಲ್ಲಿ ಮರದ ಪೆಟ್ಟಿಗೆಯಲ್ಲಿ ಏಳು ಮತ್ತು ಎಂಟು ವರ್ಷದೊಳಗಿನ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿವೆ. ಇವರು ಜೂನ್ 5 ರಿಂದ ನಾಪತ್ತೆಯಾಗಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕಾರ್ಖಾನೆಯಲ್ಲಿ ಇಬ್ಬರು ಮಕ್ಕಳ ಶವ ಪತ್ತೆಯಾದ ಬಗ್ಗೆ ಜಾಮಿಯಾನಗರ ಪಿಎಸ್ ಗೆ ಕರೆ ಬಂದಿತ್ತು. ನಂತರ ಅಲ್ಲಿಗೆ ತೆರಳಿದಾಗ ಮರದ ಪೆಟ್ಟಿಗೆಯಲ್ಲಿ ಶವಗಳು ಕಂಡುಬಂದಿತು. ಈ ಮನೆಯಲ್ಲಿ ಮಕ್ಕಳು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದರು ಮತ್ತು ಅವರ ತಂದೆ ಬಲ್ಬೀರ್ ಅಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತ ಮಕ್ಕಳು ಅಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಪೋಷಕರೊಂದಿಗೆ ಊಟ ಮಾಡಿದ್ದು, 3-30 ರ ಸುಮಾರಿನಲ್ಲಿ ನಾಪತ್ತೆಯಾಗಿದ್ದಾರೆ ಎಂಬುದು ಸ್ಥಳೀಯರ ವಿಚಾರಣೆಯಿಂದ ತಿಳಿದುಬಂದಿದೆ. ನಂತರ ಪೋಷಕರು ತಮ್ಮ ಮಕ್ಕಳ ಹುಡುಕಾಟ ನಡೆಸಿದಾಗ ಮರದ ಪೆಟ್ಟಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ದೇಹಗಳ ಮೇಲೆ ಯಾವುದೇ ಗಾಯವಿಲ್ಲ ಎಂದು ಅಪರಾಧ ತಂಡ ದೃಢಪಡಿಸಿದೆ. ಇದು ಆಕಸ್ಮಿಕವಾಗಿ ಉಸಿರುಕಟ್ಟಿ ಸಾವನ್ನಪ್ಪಿರು ಪ್ರಕರಣ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT