ಕಾಂಗ್ರೆಸ್ ಸೇರ್ಪಡೆಯಾದ ಭಜರಂಗ ಸೇನೆ ಕಾರ್ಯಕರ್ತರು 
ದೇಶ

ಮಧ್ಯ ಪ್ರದೇಶ: ಭಜರಂಗ ಸೇನೆ ಕಾಂಗ್ರೆಸ್‌ ನಲ್ಲಿ ವಿಲೀನ, ಬಿಜೆಪಿ ಸೋಲಿಸುವ ಶಪಥ!

ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ  ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.

ಭೋಪಾಲ್: ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ  ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.

ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ ವಿಲೀನ ನಡೆಯಿತು.ನೂರಾರು ಭಜರಂಗ ಸೇನೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ದೀಪಕ್ ಜೋಶಿ ಅವರಿಗೆ ಭಜರಂಗ ಸೇನೆ ಮುಖಂಡರು ಆಪ್ತರಾಗಿದ್ದಾರೆ. 

ಭಜರಂಗ ಸೇನೆ ರಾಷ್ಟ್ರೀಯ ಅಧ್ಯಕ್ಷ ರಜನೀಶ್ ಪಟೇರಿಯಾ ಮತ್ತು ಸಂಯೋಜಕ ರಘುನಂದನ್ ಶರ್ಮಾ ಅವರು ವಿಲೀನದ ಘೋಷಣೆ ಮಾಡಿದ್ದಾರೆ. ಜೋಶಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಮಲ್ ನಾಥ್ ಅವರಿಗೆ ಗದೆ ಹಾಗೂ ಸ್ಮರಣಿಕೆ ನೀಡಿದ ಭಜರಂಗ ಸೇನೆ ಸದಸ್ಯರು  ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು. 

ಈ ಬೆಳವಣಿಗೆಯನ್ನು ಸ್ವಾಗತಿಸಿದ ಕಮಲ್ ನಾಥ್, ಚುನಾವಣೆ ಸಮೀಪಿಸುತ್ತಿರುವಾಗ  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಪೊಳ್ಳು ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚೌಹಾಣ್ ಇದುವರೆಗೆ 20,000 ಕ್ಕೂ ಹೆಚ್ಚು ಘೋಷಣೆ  ಮಾಡಿದ್ದಾರೆ, ಅದು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚೌಹಾಣ್ ಈಗ ಮಹಿಳೆಯರು, ಯುವಕರು ಮತ್ತು ಉದ್ಯೋಗಿಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅವರು 18 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗಲೂ ಏನನ್ನೂ ಮಾಡಿಲ್ಲ ಎಂದು ಕಮಲ್  ನಾಥ್ ವಾಗ್ದಾಳಿ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT