ಕಾಂಗ್ರೆಸ್ ಸೇರ್ಪಡೆಯಾದ ಭಜರಂಗ ಸೇನೆ ಕಾರ್ಯಕರ್ತರು 
ದೇಶ

ಮಧ್ಯ ಪ್ರದೇಶ: ಭಜರಂಗ ಸೇನೆ ಕಾಂಗ್ರೆಸ್‌ ನಲ್ಲಿ ವಿಲೀನ, ಬಿಜೆಪಿ ಸೋಲಿಸುವ ಶಪಥ!

ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ  ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.

ಭೋಪಾಲ್: ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ  ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.

ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ ವಿಲೀನ ನಡೆಯಿತು.ನೂರಾರು ಭಜರಂಗ ಸೇನೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ದೀಪಕ್ ಜೋಶಿ ಅವರಿಗೆ ಭಜರಂಗ ಸೇನೆ ಮುಖಂಡರು ಆಪ್ತರಾಗಿದ್ದಾರೆ. 

ಭಜರಂಗ ಸೇನೆ ರಾಷ್ಟ್ರೀಯ ಅಧ್ಯಕ್ಷ ರಜನೀಶ್ ಪಟೇರಿಯಾ ಮತ್ತು ಸಂಯೋಜಕ ರಘುನಂದನ್ ಶರ್ಮಾ ಅವರು ವಿಲೀನದ ಘೋಷಣೆ ಮಾಡಿದ್ದಾರೆ. ಜೋಶಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಮಲ್ ನಾಥ್ ಅವರಿಗೆ ಗದೆ ಹಾಗೂ ಸ್ಮರಣಿಕೆ ನೀಡಿದ ಭಜರಂಗ ಸೇನೆ ಸದಸ್ಯರು  ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು. 

ಈ ಬೆಳವಣಿಗೆಯನ್ನು ಸ್ವಾಗತಿಸಿದ ಕಮಲ್ ನಾಥ್, ಚುನಾವಣೆ ಸಮೀಪಿಸುತ್ತಿರುವಾಗ  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ಪೊಳ್ಳು ಘೋಷಣೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚೌಹಾಣ್ ಇದುವರೆಗೆ 20,000 ಕ್ಕೂ ಹೆಚ್ಚು ಘೋಷಣೆ  ಮಾಡಿದ್ದಾರೆ, ಅದು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಚೌಹಾಣ್ ಈಗ ಮಹಿಳೆಯರು, ಯುವಕರು ಮತ್ತು ಉದ್ಯೋಗಿಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅವರು 18 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗಲೂ ಏನನ್ನೂ ಮಾಡಿಲ್ಲ ಎಂದು ಕಮಲ್  ನಾಥ್ ವಾಗ್ದಾಳಿ ನಡೆಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT