ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಹುಟ್ಟುಹಬ್ಬದ ಪಾರ್ಟಿ ಬಿಲ್‌ಗಾಗಿ ಸ್ನೇಹಿತನನ್ನೇ ಹತ್ಯೆ ಮಾಡಿದ ನಾಲ್ವರು ಯುವಕರ ಬಂಧನ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರನ್ನು ಜೈಲಿಗೆ ಕಳುಹಿಸಲಾಗಿದೆ. ಇಬ್ಬರು ಅಪ್ರಾಪ್ತ ಆರೋಪಿಗಳಾಗಿದ್ದು, ಅವರನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೇ 31 ರಂದುಹುಟ್ಟುಹಬ್ಬ ಆಚರಿಸಿಕೊಂಡ ಹತ್ಯೆಯಾದ ಯುವಕ, ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಂಡಿಯಲ್ಲಿರುವ ಧಾಬಾದಲ್ಲಿ ಅಂದು ರಾತ್ರಿ 8 ಗಂಟೆ ಸುಮಾರಿಗೆ ಸ್ನೇಹಿತರ ಜತೆ ಪಾರ್ಟಿ ಮಾಡಿದ್ದಾನೆ.

ಊಟದ ಬಿಲ್ ಸುಮಾರು 10,000 ರೂಪಾಯಿ ಆಗಿದ್ದು, ಅದನ್ನು ಹತ್ಯೆಯಾದ ಯುವಕ ಪಾವತಿಸಿದ್ದಾನೆ. ನಂತರ ಆತನಿಗೆ ಹಣ ಕೊಡುವುದಾಗಿ ಉಳಿದ ಸ್ನೇಹಿತರು ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಬಳಿಕ ಕೊಲೆಯಾದ ಯುವಕ ತನ್ನ ಸ್ನೇಹಿತರ ಬಳಿ ಹಣ ಕೇಳಿದಾಗ ಹಣ ಕೊಡಲು ನಿರಾಕರಿಸಿ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಾಲ್ವರು ಆರೋಪಿಗಳು ಹುಟ್ಟುಹಬ್ಬ ಆಚರಿಸಿಕೊಂಡ ಯುವಕನನ್ನು ಥಳಿಸಿ, ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಯುವಕ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT