ರೈಲು ದುರಂತದ ಮೃತದೇಹಗಳ ಚಿತ್ರ 
ದೇಶ

ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿ

ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ.

ಬಾಲಾಸೋರ್: ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ಪಿಕೆ ಜಿನಾ, ಸೋಮವಾರದವರೆಗೂ 275 ಜನರ ಸಾವಿನ ಬಗ್ಗೆ ದೃಢಪಟ್ಟಿತ್ತು. ಮೃತದೇಹಗಳ ಪರಿಶೀಲನೆ ನಂತರ ಈ ಸಂಖ್ಯೆ 288ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು. 

ಒಟ್ಟು 288 ಮೃತದೇಹಗಳ ಪೈಕಿ ಇದುವರೆಗೆ  205 ಶವಗಳನ್ನು ಗುರುತಿಸಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ 83 ಶವಗಳನ್ನು ಗುರುತಿಸಲು ಏಮ್ಸ್-ಭುವನೇಶ್ವರ ಮತ್ತು ಇತರ ಆಸ್ಪತ್ರೆಗಳಲ್ಲಿ ಇಡಲಾಗಿದೆ ಎಂದು ಅವರು ಹೇಳಿದರು.

ಸರ್ಕಾರ ತೆರೆದಿರುವ ಸಹಾಯವಾಣಿ ಸಂಖ್ಯೆಗಳಲ್ಲಿ ಹಲವರ ಕುರಿತು ವಿಚಾರಿಸಲಾಗಿದೆ. ಎಲ್ಲಾ ದೇಹಗಳನ್ನು ಗುರುತಿಸಲಾಗುವುದು ಎಂಬ ಆಶಾ ಭಾವನೆ ಹೊಂದಿದ್ದೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಮತ್ತು ಮೃತದೇಹಗಳನ್ನು ಆಯಾ ಸ್ಥಳಗಳಿಗೆ ಸಾಗಿಸುವ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ ಎಂದು ಅವರು ಹೇಳಿದರು.

ಈ ಮಧ್ಯೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಡಿಶಾದ 39 ಮೃತ ವ್ಯಕ್ತಿಗಳ ಕುಟುಂಬಗಳಿಗೆ 1.95 ಕೋಟಿ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

SCROLL FOR NEXT