ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ 
ದೇಶ

ಒಡಿಶಾ ತ್ರಿವಳಿ ರೈಲು ಅಪಘಾತದ ಹಿಂದೆ ಟಿಎಂಸಿ ಪಿತೂರಿ: ಮಮತಾ ವಿರುದ್ಧ ಸುವೆಂದು ಅಧಿಕಾರಿ ಕಿಡಿ

ಕನಿಷ್ಠ 275 ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೋಮವಾರ ಆರೋಪಿಸಿದ್ದಾರೆ.

ಕೊಲ್ಕೋತಾ: ಕನಿಷ್ಠ 275 ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಹಳಿಗಳಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಅಪಘಾತ ನಡೆದಿತ್ತು.

ಒಡಿಶಾ ರೈಲು ದುರಂತದ ಹಿಂದೆ ಟಿಎಂಸಿಯ ಪಿತೂರಿ ಇದೆ. ಘಟನೆ ಬೇರೆ ರಾಜ್ಯದಲ್ಲಾಗಿದ್ದರು ಅವರು (ಮಮತಾ ಬ್ಯಾನರ್ಜಿ) ನಿನ್ನೆಯಿಂದ ಏಕೆ ಗಾಬರಿಗೊಂಡಿದ್ದಾರೆ. ಸಿಬಿಐ ತನಿಖೆಗೆ ಅವರೇಕೆ ಹೆದರುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಟಿಎಂಸಿ ಪಕ್ಷದವರು ಪೊಲೀಸರ ನೆರವಿನೊಂದಿಗೆ ರೈಲ್ವೆ ಅಧಿಕಾರಿಗಳಿಬ್ಬರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಇಬ್ಬರು ರೈಲ್ವೆ ಅಧಿಕಾರಿಗಳ ನಡುವಿನ ಸಂಭಾಷಣೆ ಇವರಿಗೆ ಹೇಗೆ ಗೊತ್ತಾಯಿತು? ಸಂಭಾಷಣೆ ಹೇಗೆ ಸೋರಿಕೆಯಾಯಿತು ಎಂಬುದು ಸಿಬಿಐ ತನಿಖೆಯಿಂದ ಹೊರಬರಬೇಕಿದೆ. ಸತ್ಯಾಂಶ ತಿಳಿಯದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇನೆ’ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವ ರೈಲ್ವೆ ಮಂಡಳಿಯ ನಿರ್ಧಾರವನ್ನು ಟೀಕಿಸಿದ್ದರು. ನಾನು ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ಪ್ರಕರಣವನ್ನು ಸಿಬಿಐಗೆ ನೀಡಿದ್ದೇನೆ ಆದರೆ ಇದುವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. 12 ವರ್ಷ ಕಳೆದರೂ ಯಾವುದೇ ಫಲಿತಾಂಶ ಕಾಣುತ್ತಿಲ್ಲ ಎಂದಿದ್ದರು.

ಇನ್ನೂ ಬಾಲೇಶ್ವರ್‌ನಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರ ತನಿಖೆ ಆರಂಭಿಸಿದೆ. 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT