ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು 
ದೇಶ

ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಹೌರಾ: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಜೂನ್ 2 ರಂದು ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಅದಾದ ನಂತರ ರೈಲು ತನ್ನ ಸೇವೆಗಳನ್ನು ಪುನರಾರಂಭಿಸುತ್ತಿರುವುದು ಇದೇ ಮೊದಲು. ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 288 ಜನರು ಸಾವಿಗೀಡಾಗಿದ್ದರು.

ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆಯಿತು. ಈ ವೇಳೆ ಹಲವಾರು ಬೋಗಿಗಳು ಹಳಿತಪ್ಪಿದವು. ಬಳಿಕ ಬೆಂಗಳೂರಿನ ಯಶವಂತಪುರದಿಂದ ಬರುತ್ತಿದ್ದ ಹೌರಾ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು.

ಸೋಮವಾರ, ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಸೇವೆಗಳು ಪುನರಾರಂಭಗೊಂಡ ನಂತರ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಲ್ಲಿ ಪುನಃಸ್ಥಾಪಿಸಲಾದ ರೈಲ್ವೆ ಹಳಿಯನ್ನು ದಾಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?