ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು 
ದೇಶ

ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಹೌರಾ: ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಜೂನ್ 2 ರಂದು ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಅದಾದ ನಂತರ ರೈಲು ತನ್ನ ಸೇವೆಗಳನ್ನು ಪುನರಾರಂಭಿಸುತ್ತಿರುವುದು ಇದೇ ಮೊದಲು. ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 288 ಜನರು ಸಾವಿಗೀಡಾಗಿದ್ದರು.

ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆಯಿತು. ಈ ವೇಳೆ ಹಲವಾರು ಬೋಗಿಗಳು ಹಳಿತಪ್ಪಿದವು. ಬಳಿಕ ಬೆಂಗಳೂರಿನ ಯಶವಂತಪುರದಿಂದ ಬರುತ್ತಿದ್ದ ಹೌರಾ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು.

ಸೋಮವಾರ, ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಸೇವೆಗಳು ಪುನರಾರಂಭಗೊಂಡ ನಂತರ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಲ್ಲಿ ಪುನಃಸ್ಥಾಪಿಸಲಾದ ರೈಲ್ವೆ ಹಳಿಯನ್ನು ದಾಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT