ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವ ಕುಸ್ತಿಪಟುಗಳು 
ದೇಶ

ಡಬ್ಲ್ಯುಎಫ್‌ಐಗೆ ಮಹಿಳಾ ಮುಖ್ಯಸ್ಥರನ್ನು ನೇಮಿಸಿ, ನಮ್ಮ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿ: ಅನುರಾಗ್ ಠಾಕೂರ್‌ಗೆ ಕುಸ್ತಿಪಟುಗಳ ಬೇಡಿಕೆ

ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವುಗಳೆಂದರೆ...

1. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಗೆ ಮಹಿಳೆಯೊಬ್ಬರು ಮುಖ್ಯಸ್ಥರಾಗಿರಬೇಕು.
2. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಗೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕು.
3. ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು WFI ನ ಭಾಗವಾಗಿರಲು ಸಾಧ್ಯವಿಲ್ಲ.
4. ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯ ಸಂಬಂಧ ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು
5. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಆದರೆ, ಡಬ್ಲ್ಯುಎಫ್‌ಐ ಕಾರ್ಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಹುದೇ ಅಥವಾ ಸಂವಿಧಾನದಲ್ಲಿ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ದಿನದ ನಂತರ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಸರ್ಕಾರ ಎರಡನೇ ಬಾರಿಗೆ ಮಾತುಕತೆಗೆ ಆಹ್ವಾನಿಸಿದೆ.

ಜನವರಿಯಲ್ಲಿ, ಕುಸ್ತಿಪಟುಗಳು ಅನುರಾಗ್ ಠಾಕೂರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಮತ್ತು ಸಮಿತಿಯನ್ನು ರಚಿಸಿದ ನಂತರ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ಆ ಸಮಯದಲ್ಲಿ, ಮಾಜಿ ಕುಸ್ತಿಪಟು ಮತ್ತು ಬಿಜೆಪಿ ನಾಯಕಿ ಬಬಿತಾ ಫೋಗಟ್ ಮಧ್ಯವರ್ತಿ ಪಾತ್ರವನ್ನು ನಿರ್ವಹಿಸಿದರು.

ಇದಕ್ಕೂ ಮುನ್ನ ಬುಧವಾರ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಸಾಕ್ಷಿ ಮಲಿಕ್, 'ನಾವು ಎಲ್ಲ ವಿಚಾರದಲ್ಲೂ ಪಾರದರ್ಶಕವಾಗಿದ್ದೇವೆ. ಮುಚ್ಚಿದ ಬಾಗಿಲಿನ ಹಿಂದೆ ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಾವು ನಮ್ಮ ವರಿಷ್ಠರು ಮತ್ತು ಬೆಂಬಲಿಗರೊಂದಿಗೆ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ಚರ್ಚಿಸುತ್ತೇವೆ ಮತ್ತು ಈ ಪ್ರಸ್ತಾವನೆಗೆ ಎಲ್ಲರೂ ಒಪ್ಪಿಗೆ ನೀಡಿದರೆ ಮಾತ್ರ ನಾವು ಒಪ್ಪುತ್ತೇವೆ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT