ಅಮಿತ್ ಶಾ 
ದೇಶ

ಮಣಿಪುರದಲ್ಲಿ ಹಿಂಸಾಚಾರ: ಅಮಿತ್ ಶಾ ನಿವಾಸದ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಕುಕಿ ಬುಡಕಟ್ಟಿನ ಮಹಿಳೆಯರು ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಕುಕಿ ಬುಡಕಟ್ಟಿನ ಮಹಿಳೆಯರು ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

"ಶಾಂತಿ ಮರುಸ್ಥಾಪಿಸಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ ಹೊರತಾಗಿಯೂ, ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರಿದಿವೆ. ಇಲ್ಲಿ ಜೀವಗಳು ಅಪಾಯದಲ್ಲಿವೆ. ಗೃಹ ಸಚಿವರು ಹಾಗೂ ಪ್ರಧಾನಿ ಮೋದಿ ಮಾತ್ರ ನಮಗೆ ಸಹಾಯ ಮಾಡಬಹುದು" ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಹಲವರ ಪೈಕಿ ನಾಲ್ವರನ್ನು ಸಚಿವರ ಭೇಟಿಗೆ ಅವಕಾಶ ನೀಡಲಾಯಿತು. ಉಳಿದರವನ್ನು ಜಂಟರ್ ಮಂತರ್'ಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 98 ಜನರು ಸಾವಿಗೀಡಾಗಿದ್ದು, 310 ಮಂದಿ ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 37,450 ಮಂದಿ 272 ಶಿಬಿರಗಳಲ್ಲಿ ಆಶ್ರ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT