ಮೃತ ಸಂಜೀವ್ ಜೀವ 
ದೇಶ

ಲಖನೌ ಕೋರ್ಟ್‌ನಲ್ಲಿ ಗ್ಯಾಂಗ್​ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾಗೆ ಗುಂಡಿಕ್ಕಿ ಬರ್ಬರ ಹತ್ಯೆ, ವಿಡಿಯೋ!

ಲಖನೌ ನ ಕೈಸರ್‌ಬಾಗ್‌ನಲ್ಲಿರುವ ಪಾಸ್ಕೋ ಕೋರ್ಟ್‌ನ ಗೇಟ್‌ನಲ್ಲಿ ವಕೀಲರ ಉಡುಪಿಯಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್​ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ ಸಹ ಗುಂಡು ತಗುಲಿದೆ.

ಲಖನೌ ನ ಕೈಸರ್‌ಬಾಗ್‌ನಲ್ಲಿರುವ ಪಾಸ್ಕೋ ಕೋರ್ಟ್‌ನ ಗೇಟ್‌ನಲ್ಲಿ ವಕೀಲರ ಉಡುಪಿಯಲ್ಲಿದ್ದ ದುಷ್ಕರ್ಮಿಯೊಬ್ಬ ಗ್ಯಾಂಗ್​ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹಾಗೂ ಒಂದು ಹೆಣ್ಣು ಮಗುವಿಗೆ ಸಹ ಗುಂಡು ತಗುಲಿದೆ.

ಸಂಜೀವ್ ಜೀವಾ, ಕೃಷ್ಣಾನಂದ ರೈ ಹತ್ಯೆ ಪ್ರಕರಣದ ಆರೋಪಿಯಾಗಿದ್ದು, ಮುನ್ನಾ ಬಜರಂಗಿ ಮತ್ತು ಮುಖ್ತಾರ್ ಅನ್ಸಾರಿಗೆ ಆಪ್ತನಾಗಿದ್ದ ಎನ್ನಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಹಗಲು ಹೊತ್ತಿನಲ್ಲಿ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಲಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಕ್ನೋ ಕೋರ್ಟ್ ಕ್ಯಾಂಪಸ್‌ಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಈ ದಾಳಿಯಿಂದಾಗಿ ಮತ್ತೆ ಸಂಚಲನ ಮೂಡಿದೆ. ಪ್ರಯಾಗರಾಜ್ ಹತ್ಯಾಕಾಂಡದ ಸುಮಾರು ನಾಲ್ಕು ತಿಂಗಳ ನಂತರ, ಈ ಹತ್ಯಾಕಾಂಡವು ಸಂಚಲನವನ್ನು ಸೃಷ್ಟಿಸಿದೆ.

ವಕೀಲರ ಸೋಗಿನಲ್ಲಿ ಬಂದ ಕ್ರಿಮಿನಲ್‌ಗಳು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಯನ್ನು ಹಿಡಿದು ಪೊಲೀಸರು ಕೇಸರಬಾಗ್ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸಂಜೀವ್ ಜೀವಾ ಮುಜಾಫರ್‌ನಗರ ನಿವಾಸಿಯಾಗಿದ್ದು ಮುಖ್ತಾರ್ ಅನ್ಸಾರಿ, ಮುನ್ನಾ ಬಜರಂಗಿ ಮತ್ತು ಭಾಟಿ ಗ್ಯಾಂಗ್‌ಗಾಗಿ ಕೆಲಸ ಮಾಡುತ್ತಿದ್ದನು. ಈತನ ವಿರುದ್ಧ ಸುಮಾರು ಮೂರು ಡಜನ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಸಂಜೀವ್ ಜೀವಾ ಅವರ ಪತ್ನಿ ಪಾಯಲ್ ಮಹೇಶ್ವರಿ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಜೀವ ಬೆದರಿಕೆಯನ್ನು ತಿಳಿಸಿ ಭದ್ರತೆಗಾಗಿ ಮನವಿ ಮಾಡಿದ್ದರು. ಇದಾದ ಬಳಿಕ ಅವರ ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಆದರೆ ನ್ಯಾಯಾಲಯದ ಒಳಗೆ ದಾಳಿ ನಡೆಸಿರುವುದು ಆತಂಕವನ್ನುಂಟು ಮಾಡಿದೆ.

ಲಖನೌ ಕೋರ್ಟ್ ಕ್ಯಾಂಪಸ್‌ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇದರಲ್ಲಿ ಒಬ್ಬರ ಹೆಸರು ಲಾಲ್ ಮೊಹಮ್ಮದ್ ಎಂದು ಹೇಳಲಾಗಿದೆ. ಕೃಷ್ಣಾನಂದ ರೈ ಹತ್ಯೆ ಪ್ರಕರಣದಲ್ಲಿ ಸಂಜೀವ್ ಭಾಟಿ ಎಷ್ಟರ ಮಟ್ಟಿಗೆ ಶಾಮೀಲಾಗಿದ್ದನೆಂದರೆ ಅಂದಿನ ಶಾಸಕರ ಕಾರನ್ನು ಹತ್ತಿಸಿ ಎಕೆ 47 ನಿಂದ 27 ಗುಂಡುಗಳನ್ನು ಹಾರಿಸಿದ್ದರು ಎನ್ನಲಾಗಿದೆ. ಇದರಲ್ಲಿ ಕೃಷ್ಣಾನಂದ ರೈ ಸೇರಿದಂತೆ ಹಲವರು ಸಾವಿಗೀಡಾಗಿದ್ದರು. ಕೃಷ್ಣಾನಂದ ರೈ ಹತ್ಯೆ ಪ್ರಕರಣದಲ್ಲಿ ಮುಕ್ತಾರ್ ಅನ್ಸಾರಿ ಸೇರಿದಂತೆ ಹಲವರು ಶಿಕ್ಷೆಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT