ಪ್ರಯಾಣಿಕರು 
ದೇಶ

ರಷ್ಯಾದಲ್ಲಿ ಸಿಕ್ಕಿಬಿದ್ದ ಅಮೆರಿಕಾ ಪ್ರಯಾಣಿಕರು: ಸುರಕ್ಷಿತವಾಗಿ ಕರೆತರಲು ಹೊರಟ ಏರ್ ಇಂಡಿಯಾ ವಿಮಾನ!

ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್‌ಲೈನ್‌ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ.

ನವದೆಹಲಿ: ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್‌ಲೈನ್‌ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ. 

ಬುಧವಾರ ಮಧ್ಯಾಹ್ನ 3:21ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಏರ್ ಇಂಡಿಯಾ ವಿಮಾನ ಗುರುವಾರ ಬೆಳಗ್ಗೆ 6:14ಕ್ಕೆ ಮುಂಬೈನಿಂದ ಮಗದನ್‌ಗೆ ರಷ್ಯಾ ತಲುಪಿತು. ಏರ್ ಇಂಡಿಯಾ ವಿಮಾನ AI195 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತು ಮಗದನ್‌ ನಿಂದ ಹೊರಟಿದೆ ಎಂಬ ಸುದ್ದಿ ಬಂದಿದೆ. 

ವಿಮಾನವು ಸ್ಥಳೀಯ ಸಮಯ ಬೆಳಿಗ್ಗೆ 6:14 ಕ್ಕೆ ಆಗಮಿಸಿತು. 10:27ಕ್ಕೆ ಹೊರಟಿದೆ. ಅಲ್ಲದೆ 00:15ಕ್ಕೆ ಸ್ಯಾನ್ ಫ್ರಾನ್ಸಿಸ್ಕೋ ತಲುಪುವ ನಿರೀಕ್ಷೆಯಿದೆ. ಸ್ಯಾನ್ ಫ್ರಾನ್ಸಿಸ್ಕೋಗೆ ಆಗಮಿಸಿದ ನಂತರ, ಏರ್ ಇಂಡಿಯಾ ಪ್ರಯಾಣಿಕರಿಗೆ ವೈದ್ಯಕೀಯ ಆರೈಕೆ, ನೆಲದ ಸಾರಿಗೆ ಮತ್ತು ಮುಂದಿನ ಗಮ್ಯಸ್ಥಾನ ಸೇರಿದಂತೆ ಅಗತ್ಯ ಸಹಾಯವನ್ನು ಒದಗಿಸಲಾಗುತ್ತದೆ.

ಏರ್ ಇಂಡಿಯಾ ವಿಮಾನ ಸಂಖ್ಯೆ AI-173 ಜೂನ್ 6ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿತ್ತು. ಆದರೆ ಮಧ್ಯದಲ್ಲಿ, ಬೋಯಿಂಗ್ -777 ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾಗಿತ್ತು. ಹೀಗಾಗಿ ವಿಮಾನ ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಈ ವಿಮಾನದಲ್ಲಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿ ಇದ್ದರು. ಅದೇ ಸಮಯದಲ್ಲಿ, ರಷ್ಯಾದಲ್ಲಿ ಸಿಲುಕಿರುವ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಆಹಾರ ಮತ್ತು ಇತರ ಸೌಲಭ್ಯಗಳನ್ನು ಕಳುಹಿಸಲಾಗಿದೆ ಎಂದು ಕಂಪನಿಯು ಹೇಳಿಕೆಯನ್ನು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT