ರೈಲು ಅಪಘಾತದ ಸ್ಥಳ 
ದೇಶ

ಒಡಿಶಾ ರೈಲು ದುರಂತ: ಬಿಹಾರದ 19 ಪ್ರಯಾಣಿಕರು ನಾಪತ್ತೆ, 50 ಸಾವು- ವಿಪತ್ತು ನಿರ್ವಹಣಾ ಇಲಾಖೆ

ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ಕೋರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಬಿಹಾರದ ಕನಿಷ್ಠ 19 ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ...

ಪಾಟ್ನಾ: ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಜನ ಸಾವನ್ನಪ್ಪಿದ್ದು, ಕೋರಮಂಡಲ್ ಎಕ್ಸ್‌ಪ್ರೆಸ್‌ನಲ್ಲಿದ್ದ ಬಿಹಾರದ ಕನಿಷ್ಠ 19 ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ(ಡಿಎಂಡಿ) ತಿಳಿಸಿದೆ.

ನಾಪತ್ತೆಯಾದ ಬಿಹಾರದ 19 ಪ್ರಯಾಣಿಕರ ಪೈಕಿ ಮಧುಬನಿ ಜಿಲ್ಲೆಯ ನಾಲ್ವರು, ದರ್ಭಾಂಗಾ ಜಿಲ್ಲೆಯ ಇಬ್ಬರು, ಮುಜಾಫರ್‌ಪುರದ ಇಬ್ಬರು, ಪೂರ್ವ ಚಂಪಾರಣ್ ಜಿಲ್ಲೆಯ ಇಬ್ಬರು, ಸಮಸ್ತಿಪುರದ ಇಬ್ಬರು, ಸಿತಾಮರ್ಹಿಯ ಒಬ್ಬರು, ಪಾಟ್ನಾದ ಒಬ್ಬರು ಹಾಗೂ ಗಯಾದ ಒಬ್ಬರು, ಪೂರ್ಣಿಯಾದ ಒಬ್ಬರು, ಶೇಖ್‌ಪುರದ ಒಬ್ಬರು, ಸಿವಾನ್ ನ ಒಬ್ಬರು ಮತ್ತು ಬೇಗುಸರಾಯ್ ಒಬ್ಬರು ಸೇರಿದ್ದಾರೆ. ಎಂದು ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

"ಒಡಿಶಾ ರೈಲು ಅಪಘಾತದಲ್ಲಿ ಬಿಹಾರದ ವಿವಿಧ ಜಿಲ್ಲೆಗಳ ಕನಿಷ್ಠ 50 ಜನ ಸಾವನ್ನಪ್ಪಿದ್ದಾರೆ ಮತ್ತು 43 ಮಂದಿ ಗಾಯಗೊಂಡಿದ್ದಾರೆ" ಎಂದು ಪ್ರಕಟಣೆ ತಿಳಿಸಿದೆ.

ರೈಲು ಅಪಘಾತದಲ್ಲಿ ಸಾವನ್ನಪ್ಪಿದ ಬಿಹಾರದ 50 ಜನರಲ್ಲಿ ಒಂಬತ್ತು ಮಂದಿ ಮುಜಾಫರ್‌ಪುರ ಜಿಲ್ಲೆಯವರು, ಮಧುಬನಿ (6), ಭಾಗಲ್‌ಪುರ (7), ಪೂರ್ವ ಚಂಪಾರಣ್ (5), ಪೂರ್ಣಿಯಾ (2), ಪಶ್ಚಿಮ ಚಂಪಾರಣ್ (3), ನಾವಡಾ (2) , ದರ್ಬಂಗಾ (2), ಜಮುಯಿ (2), ಸಮಸ್ತಿಪುರ್ (3), ಬಂಕಾ (1), ಬೆವ್ಗುಯಿಸಾರೈ (1), ಗಯಾ (1), ಖಗರಿಯಾ (3), ಶರ್ಷಾ (1), ಸಿತಾಮರ್ಹಿ (1) ಮತ್ತು ಮುಂಗೇರ್ ಜಿಲ್ಲೆಯ ಒಬ್ಬರು ಎಂದು ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT