ಬ್ರಿಜ್ ಭೂಷಣ್ ಸಿಂಗ್ 
ದೇಶ

"ಬ್ರಿಜ್ ಭೂಷಣ್ ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು": ಅಂತರರಾಷ್ಟ್ರೀಯ ರೆಫರಿ ಜಗ್ಬೀರ್

ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು...

ನವದೆಹಲಿ: ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನೋಡಿದ್ದೇನೆ ಎಂದು ಅಂತಾರಾಷ್ಟ್ರೀಯ ರೆಫರಿ ಜಗ್‌ಬೀರ್‌ ಸಿಂಗ್‌ ಅವರು ಹೇಳಿದ್ದಾರೆ.

ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತ ಹಲವು ಅಗ್ರ ಕುಸ್ತಿಪಟುಗಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

"ನಾನು 2007 ರಿಂದ ಯುಡಬ್ಲ್ಯುಡಬ್ಲ್ಯೂ ರೆಫರಿ ಆಗಿದ್ದೇನೆ ಮತ್ತು ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಮೊದಲೂ ನಾನು ರೆಫರಿಯಾಗಿದ್ದೇನೆ. ಬಹಳ ಹಿಂದಿನಿಂದಲೂ ನನಗೆ ಬ್ರಿಜ್ ಭೂಷಣ್ ಗೊತ್ತು" ಎಂದು ಜಗ್ಬೀರ್ ಪಿಟಿಐಗೆ ತಿಳಿಸಿದ್ದಾರೆ.

"ಬ್ರಿಜ್‌ ಭೂಷಣ್‌ ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ನಾನು ನನ್ನ ಸ್ವಂತ ಕಣ್ಣುಗಳಿಂದ ನೋಡಿದ್ದೇನೆ. ಆದರೆ ಹುಡುಗಿಯರು ಆತನ ವಿರುದ್ಧ ದೂರುಗಳನ್ನು ದಾಖಲಿಸುವವರೆಗೆ ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಆ ದೃಶ್ಯಗಳನ್ನು ನೋಡಿ ನನಗೆ ಬೇಸರವಾಯಿತು" ಎಂದು ಅವರು ಹೇಳಿದ್ದಾರೆ.

2007 ರಿಂದ ಕೋಚ್-ಕಮ್-ಇಂಟರ್ನ್ಯಾಷನಲ್ ರೆಫರಿ ಆಗಿರುವ ಜಗಬೀರ್ ಅವರು, ಬ್ರಿಜ್ ಭೂಷಣ್ ಅವರ ದುರ್ವರ್ತನೆಯನ್ನು ಹಲವಾರು ಸಂದರ್ಭಗಳಲ್ಲಿ ತಾವು ನೋಡಿರುವುದಾಗಿ ತಿಳಿಸಿದ್ದಾರೆ.

ಬ್ರಿಜ್ ಭೂಷಣ್ ಅಧ್ಯಕ್ಷರಾದ ನಂತರ 2013 ರಲ್ಲಿ ಕಝಾಕಿಸ್ತಾನ್‌ ಪ್ರವಾಸದ ಸಂದರ್ಭದಲ್ಲಿ ಅವರು  'ನಾನು ನಿಮಗೆ ಇಂದು ಭಾರತೀಯ ಆಹಾರ ನೀಡುತ್ತೇನೆ' ಎಂದು ಹೇಳಿದರು ಮತ್ತು ಜೂನಿಯರ್ ಕುಸ್ತಿಪಟುಗಳ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದರು. ಈ ವೇಳೆ ಬ್ರಿಜ್ ಭೂಷಣ್ ಮತ್ತು ಆತನ ಸಹಚರರು ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅದಕ್ಕೆ ನಾನೇ ಸಾಕ್ಷಿ ಎಂದು ರೆಫರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT