ಮಾಯಾವತಿ 
ದೇಶ

2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಲಖನೌ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿದ ಬಳಿಕ ದೇಶದ ವಿರೋಧ ಪಕ್ಷಗಳಲ್ಲಿ ಹೊಸ ಹುರುಪು ಮೂಡಿದ್ದು, ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಿವೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಪಕ್ಷಗಳನ್ನೆಲ್ಲಾ ಒಟ್ಟಿಗೆ ಸೇರಿಸುವ ನೇತೃತ್ವ ವಹಿಸಿದ್ದಾರೆ.

ಬಿಎಸ್‌ಪಿ ಪಕ್ಷವು ಯಾವುದೇ ವಿರೋಧ ಪಕ್ಷದ ಮೈತ್ರಿಗೆ ಸೇರುವುದಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ.

ಬಿಎಸ್‌ಪಿಯ ಹಿರಿಯ ನಾಯಕ ಭೀಮರಾವ್ ಅಂಬೇಡ್ಕರ್ ಮಾತನಾಡಿ, '2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಹೋರಾಡಲು ವಿರೋಧ ಪಕ್ಷಗಳಿಗೆ ಅಡಿಪಾಯ ಸಿದ್ಧಪಡಿಸಲು ಪ್ರತಿಪಕ್ಷಗಳ ನಾಯಕರು ವಿವಿಧ ರಾಜ್ಯಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಹಲವಾರು ಸುತ್ತಿನ ಸಭೆಗಳ ನಂತರವೂ ವಿರೋಧ ಪಕ್ಷದಿಂದ ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ' ಎಂದಿದ್ದಾರೆ.

ಆದರೆ, ಬಿಎಸ್‌ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಬಿಎಸ್‌ಪಿ ಇತರ ರಾಜಕೀಯ ಪಕ್ಷಗಳ ಅನುಯಾಯಿಯಲ್ಲ. ಆದರೆ, ಅದು ಸಿದ್ಧಾಂತ ಮತ್ತು ಕೇಡರ್ ಆಧಾರಿತ ಪಕ್ಷವಾಗಿದೆ ಎಂದು ಅಂಬೇಡ್ಕರ್ ತಿಳಿಸಿದರು.

ಮಾಯಾವತಿ ಅವರು ದೇಶದಾದ್ಯಂತ ದಲಿತರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಕಠಿಣ ಮತ್ತು ಸಮರ್ಥ ಆಡಳಿತಗಾರ್ತಿ ಎಂಬ ಇಮೇಜ್ ಹೊಂದಿದ್ದಾರೆ ಎಂದು ಬಿಎಸ್ಪಿ ಪದಾಧಿಕಾರಿಗಳು ಹೇಳಿದ್ದಾರೆ.

ಮಾಯಾವತಿ ಅವರು ಪ್ರಧಾನಿ ಅಭ್ಯರ್ಥಿಯಾದ ನಂತರ ಬಿಜೆಪಿಗೆ ತೆರಳಿರುವ ದಲಿತರು ಮತ್ತೆ ಬಿಎಸ್‌ಪಿಗೆ ಮರಳುತ್ತಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT