ಸಂಗ್ರಹ ಚಿತ್ರ 
ದೇಶ

‘ಬಾಂಬ್’ ಕುರಿತು ವಿಮಾನದಲ್ಲಿ ಚರ್ಚೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನನ್ನು ಬಂಧನಕ್ಕೊಳಪಡಿಸಲಾಗಿದೆ.

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನನ್ನು ಬಂಧನಕ್ಕೊಳಪಡಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಜೀಂ ಖಾನ್ ಎಂದು ಗುರುತಿಸಲಾಗಿದೆ. ಜೂನ್ 7 ರಂದು ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದೆಹಲಿಯಿಂದ ಮುಂಬೈಗೆ ಸಂಪರ್ಕ ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದ.

ಪ್ರಯಾಣದ ವೇಳೆ ದೂರವಾಣಿ ಸಂಭಾಷಣೆಯ ವೇಳೆ ‘ಬಾಂಬ್’ ಬಗ್ಗೆ ಮಾತನಾಡಿದ್ದು, ಇದನ್ನು ಸಹ ಪ್ರಯಾಣಿಕರಾಗಿದ್ದ ಮಹಿಳೆಯೊಬ್ಬರು ಕೇಳಿಸಿಕೊಂಡಿದ್ದಾರೆ. ಕೂಡಲೇ ವಿಮಾನದಲ್ಲಿದ್ದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ಸಿಬ್ಬಂದಿಗಳು ವ್ಯಕ್ತಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಹಸ್ತಾಂತರಿಸಿದ್ದಾರೆ. ನಂತರ ದೆಹಲಿ ಪೊಲೀಸರು ಆತನನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT