ಮಲ್ಲಿಕಾರ್ಜುನ ಖರ್ಗೆ 
ದೇಶ

ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಸುಳ್ಳು ಭರವಸೆಗಳನ್ನು ನೀಡಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ದೇಶದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡಿದೆ ಎಂದು ಆರೋಪಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ದೇಶದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡಿದೆ ಎಂದು ಆರೋಪಿಸಿದರು.

ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, 'ಮೋದಿ ಸರ್ಕಾರ ದೇಶದ ರೈತರಿಗೆ ಎರಡು ಭರವಸೆಗಳನ್ನು ನೀಡಿತ್ತು. ಕನಿಷ್ಠ ಬೆಂಬಲ ಬೆಲೆಯನ್ನು 'ವೆಚ್ಚ + 50 ಪ್ರತಿಶತ ಲಾಭ'ಕ್ಕೆ ನಿಗದಿಪಡಿಸುವುದು ಮತ್ತು 2022ರ ವೇಳೆಗೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವುದು. ಇದೀಗ ಈ ಎರಡೂ ಭರವಸೆಗಳು ಸುಳ್ಳಾಗಿವೆ' ಎಂದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಬುಧವಾರ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಏರಿಕೆ ಮಾಡಲು ಅನುಮತಿ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಖರ್ಗೆ, 'ಪಿಆರ್ ಹಸಿವಿನಿಂದ ಕಂಗೆಟ್ಟಿರುವ ಮೋದಿ ಸರ್ಕಾರವು ಖಾರಿಫ್ ಬೆಳೆಗೆ ಎಂಎಸ್‌ಪಿ ಹೆಚ್ಚಿಸುತ್ತೇವೆ ಎಂದು ಬಿಂಬಿಸಿದೆ. ಆದರೆ, ಎಂಎಸ್‌ಪಿ ದರದಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸುತ್ತಿಲ್ಲ. ಕೃಷಿಗೆ ಬಜೆಟ್ ಕಡಿತಗೊಳಿಸಲಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ್ದು, ಈ ಒಂಬತ್ತು ವರ್ಷವು ಸರ್ಕಾರ 62 ಕೋಟಿ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕೃಷಿ ಬಜೆಟ್‌ನಲ್ಲಿ ಕಡಿತ ಮಾಡಲಾಗಿದೆ. 1 ಲಕ್ಷ ಕೋಟಿ ಕೃಷಿ ಮೂಲಸೌಕರ್ಯ ನಿಧಿಯ ಭರವಸೆಯ ಹೊರತಾಗಿಯೂ ಮೂರು ವರ್ಷಗಳಲ್ಲಿ ಕೇವಲ 12,000 ಕೋಟಿ ರೂ. ಮೀಸಲಿಡಲಾಗಿದೆ ಎಂದು ದೂರಿದ್ದಾರೆ.

'ಕೃಷಿಗೆ ಬಜೆಟ್ ಕಡಿತ! ಕಿಸಾನ್ ಸಮ್ಮಾನ್ ನಿಧಿಯಿಂದ 2 ಕೋಟಿ ರೈತರ ಹೆಸರನ್ನು ತೆಗೆದುಹಾಕಲಾಗಿದೆ! ಕೃಷಿ ಬಜೆಟ್‌ನಲ್ಲಿ ಕಡಿತಗೊಳಿಸಲಾಗಿದೆ ಮತ್ತು 1 ಲಕ್ಷ ಕೋಟಿ ಕೃಷಿ ಮೂಲಸೌಕರ್ಯ ನಿಧಿಯ ಭರವಸೆಯ ಹೊರತಾಗಿಯೂ ಮೂರು ವರ್ಷಗಳಲ್ಲಿ ಕೇವಲ 12,000 ಕೋಟಿ ರೂ. ನೀಡಲಾಗಿದೆ. ಮೋದಿ ಸರ್ಕಾರದ 9 ವರ್ಷಗಳು ದೇಶದ 62 ಕೋಟಿ ರೈತರಿಗೆ ಶಾಪವಾಗಿ ಪರಿಣಮಿಸಿದೆ' ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT