ಮಣಿಪುರ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮೂವರು ಸಾವು, ಇಬ್ಬರಿಗೆ ಗಾಯ

ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಗುವಾಹಟಿ: ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಇಂದು ಬೆಳಗಿನ ಜಾವ ಕಾಂಗ್‌ಪೋಕ್ಪಿ ಜಿಲ್ಲೆ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಗಡಿಯಲ್ಲಿರುವ ಖೋಕೆನ್ ಗ್ರಾಮದಲ್ಲಿ ಹಿಂಸಾಚಾರ ನಡೆದಿದೆ.

ಅಪರಿಚಿತ ಬಂದೂಕುಧಾರಿಗಳ ಗುಂಪು ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದಾಗ, ಸ್ಥಳೀಯರು ತಕ್ಷಣ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ಸೇನಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ಸೇನೆ ಸ್ಥಳಕ್ಕೆ ಬರುವ ವೇಳೆಗೆ ಗುಂಡಿನ ದಾಳಿಯಲ್ಲಿ ಮೂವರು ಗ್ರಾಮಸ್ಥರನ್ನು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಜಂಗ್‌ಪಾವೊ ಟೌತಾಂಗ್, ಖೈಮಾಂಗ್ ಗೈಟ್ ಮತ್ತು ಡೊಮ್‌ಖೋಯ್(ಮಹಿಳೆ) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಥೋಂಗ್ನೆ ಮತ್ತು ತಂಗ್ಖೋಜಾಂಗ್ ಎಂದು ಗುರುತಿಸಲಾಗಿದೆ.

ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್) ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

"ಜೂನ್ 9 ರ ಬೆಳಗ್ಗೆ ಸೇನಾ ಸಮವಸ್ತ್ರದ ಧರಿಸಿ ಮತ್ತು ಸೇನಾ ವಾಹನಗಳನ್ನು ಬಳಸಿ ಮೈಟೆಯ್ ಉಗ್ರಗಾಮಿಗಳು ಖೋಕೆನ್ ಗ್ರಾಮದ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಐಟಿಎಲ್ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂಸಾಚಾರದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂರನೆ ಗಾಯಾಳು ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ನಾವು ಇನ್ನೂ ಘಟನಾ ಸ್ಥಳವನ್ನು ತಲುಪಿಲ್ಲ"ಎಂದು ಅಧಿಕಾರಿ ಹೇಳಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT