ಅಖಿಲೇಶ್ ಯಾದವ್ 
ದೇಶ

ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆ ಅನುಸರಿಸುತ್ತಿದ್ದು, ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ: ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆಯನ್ನು ಅನುಸರಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಯಾಗಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷವು 'ತುಂಬಾ ಮೃದು'ವಾಗಿದೆ. ಆದರೆ ಇದೀ ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ ಎಂದು ಶನಿವಾರ ಹೇಳಿದರು.

ಸೀತಾಪುರ: ಸಮಾಜವಾದಿ ಪಕ್ಷ 'ಮೃದು ಹಿಂದುತ್ವ' ಧೋರಣೆಯನ್ನು ಅನುಸರಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಯಾಗಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷವು 'ತುಂಬಾ ಮೃದು'ವಾಗಿದೆ. ಆದರೆ ಇದೀ ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ ಎಂದು ಶನಿವಾರ ಹೇಳಿದರು.

'ಭಾರತೀಯ ಜನತಾ ಪಕ್ಷವು (ಬಿಜೆಪಿ) ಒಂದು ಪದವನ್ನು ಹುಟ್ಟುಹಾಕಿದೆ. ಅವರು ಹೇಳುತ್ತಿದ್ದಾರೆ ನಾವೂ ಮೃದು ಹಿಂದುತ್ವದ ಹಾದಿಯಲ್ಲಿ ಹೋಗುತ್ತಿರುವಂತೆ ಹೇಳುತ್ತಿದ್ದಾರೆ. ಆದರೆ ಗಾಬರಿಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಸೀತಾಪುರ ಜಿಲ್ಲೆಯ ಪ್ರಮುಖ ಧಾರ್ಮಿಕ ಸ್ಥಳವಾದ ನೈಮಿಶಾರಣ್ಯದಲ್ಲಿ ಸಮಾಜವಾದಿ ಪಕ್ಷದ ಎರಡು ದಿನಗಳ ತರಬೇತಿ ಶಿಬಿರವನ್ನು ಮುಕ್ತಾಯಗೊಳಿಸುವಾಗ, ಅಖಿಲೇಶ್ ಯಾದವ್ 'ಮೃದು ಹಿಂದುತ್ವ'ಕ್ಕಾಗಿ ಬಿಜೆಪಿಯನ್ನು ಗುರಿಯಾಗಿಸಿದ್ದಾರೆ.

ಇತ್ತೀಚೆಗೆ ಬಿಜೆಪಿಯ 'ಟಿಫಿನ್ ಪೇ ಚರ್ಚಾ' ಕಾರ್ಯಕ್ರಮದಲ್ಲಿ ವ್ಯಂಗ್ಯವಾಡಿದ ಕುರಿತಂತೆ ಎಸ್‌ಪಿ ಮುಖ್ಯಸ್ಥರು, 'ನಾವು ಮತ್ತು ನೀವು ಇಲ್ಲಿ 48 ಡಿಗ್ರಿ ಸೆಲ್ಸಿಯಸ್‌ನ ಶಾಖದಲ್ಲಿ ಕುಳಿತಿದ್ದೇವೆ. ಆದರೆ ಬಿಜೆಪಿಗರು ಮೃದು ಹಿಂದುತ್ವ ಎಂಬ ಆರೋಪ ಮಾಡುತ್ತಿದ್ದಾರೆ ಎಂದರು.

ಶುಕ್ರವಾರ ಇಲ್ಲಿ ಎರಡು ದಿನಗಳ ಕಾರ್ಯಕರ್ತರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್, ನೈಮಿಷಾರಣ್ಯದಿಂದ ಅಸುರರ ವಿನಾಶ ಪ್ರಾರಂಭವಾಯಿತು ಎಂದು ಹೇಳಿದ್ದರು.

ಎರಡು ದಿನಗಳಲ್ಲಿ ರಾಮ್ ಗೋಪಾಲ್ ಯಾದವ್, ಶಿವಪಾಲ್ ಯಾದವ್, ನರೇಶ್ ಉತ್ತಮ್, ರಾಮಾಚಲ ರಾಜ್‌ಭರ್ ಮತ್ತು ಪಕ್ಷದ ಇತರ ಪ್ರಮುಖರಿಂದ ಸುಮಾರು 5,000 ಪಕ್ಷದ ಕಾರ್ಯಕರ್ತರು ತರಬೇತಿ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT