ಟಿಪ್ಪು ಸುಲ್ತಾನ್ ಸ್ಮಾರಕ 
ದೇಶ

ಮಹಾರಾಷ್ಟ್ರ: ಅಕ್ರಮವಾಗಿ ನಿರ್ಮಿಸಿದ ಟಿಪ್ಪು ಸುಲ್ತಾನ್ ಸ್ಮಾರಕ ಧ್ವಂಸ!

ಮಹಾರಾಷ್ಟ್ರದ ಧುಲೆ ಟ್ರಾಫಿಕ್ ಜಂಕ್ಷನ್ ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಸ್ಮಾರಕವನ್ನು ನಾಗರಿಕ ಸೇವಾ ಸಂಸ್ಥೆ ಧ್ವಂಸಗೊಳಿಸಿದೆ.

ಧುಲೆ: ಮಹಾರಾಷ್ಟ್ರದ ಧುಲೆ ಟ್ರಾಫಿಕ್ ಜಂಕ್ಷನ್ ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಸ್ಮಾರಕವನ್ನು ನಾಗರಿಕ ಸೇವಾ ಸಂಸ್ಥೆ ಧ್ವಂಸಗೊಳಿಸಿದೆ.

ಮುಂಬೈನಿಂದ ಸುಮಾರು 322 ಕಿ. ಮೀ. ದೂರದಲ್ಲಿರುವ ಧುಲೆ ನಗರದ ವಡ್ಜೈ ರಸ್ತೆಯ ಇಂಟರ್ ಜಂಕ್ಷನ್ ನಲ್ಲಿ ಆಲ್ ಇಂಡಿಯಾ ಇತ್ತೆಹಾದುಲ್ ಮಜ್ಲಿಸ್-ಎ-ಮುಸ್ಲಿಮೀನ್ ಶಾಸಕ ಫಾರೂಕ್ ಶಾ ಅನ್ವರ್ ಇದನ್ನು ನಿರ್ಮಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ಅದನ್ನು ಕೆಡವಲಾಯಿತು. ಶಾಸಕರೇ ಅದನ್ನು ತೆಗೆಯುವಂತೆ ತಿಳಿಸಿದ್ದರು.ಆದರೆ, ಜಿಲ್ಲಾಧಿಕಾರಿ ಮತ್ತು ಪಿಡಬ್ಲ್ಯುಡಿ ಅಧಿಕಾರಿಗಳ ಸಭೆಯ ನಂತರ ಸ್ಮಾರಕವನ್ನು ನೆಲಸಮಗೊಳಿಸಲಾಯಿತು ಎಂದು ಅವರು ಹೇಳಿದರು.

ಈ ಪ್ರದೇಶದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT