ಕೇಂದ್ರ ಸಚಿವ ಗಿರಿರಾಜ್ ಸಿಂಗ್ 
ದೇಶ

ಅಕ್ರಮ ಮುಸ್ಲಿಂ ವಲಸಿಗರನ್ನು ದೇಶದಿಂದ ಓಡಿಸುತ್ತೇವೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಎಲ್ಲಾ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರು ಮತ್ತು ರೋಹಿಂಗ್ಯಾ ಮುಸ್ಲಿಮರನ್ನು ರಾಜ್ಯದಿಂದ ವಾಪಸ್ ಕಳುಹಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಗತ್ಯ ಕ್ರಮಗಳ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಪಾಟ್ನಾ: ಎಲ್ಲಾ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರು ಮತ್ತು ರೋಹಿಂಗ್ಯಾ ಮುಸ್ಲಿಮರನ್ನು ರಾಜ್ಯದಿಂದ ವಾಪಸ್ ಕಳುಹಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಗತ್ಯ ಕ್ರಮಗಳ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಬೇಗುಸರಾಯ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಗಿರಿರಾಜ್ ಸಿಂಗ್ ಅವರು ಉತ್ತರಿಸಿದರು. ಈ ವೇಳೆ ಅಕ್ರಮ ಮುಸ್ಲಿಂ ವಲಸಿಕರನ್ನು ದೇಶದಿಂದ ಓಡಿಸಬೇಕಿದೆ ಎಂದು ಹೇಳಿದರು.

ಅಕ್ರಮ ಮುಸ್ಲಿಂ ವಲಸಿಗರ ಓಡಿಸಲುವಲ್ಲಿ ನಿತೀಶ್ ಸರ್ಕಾರ ವಿಫಲವಾಗಿದ್ದೇ ಆದರೆ, ಮುಂದಿನ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ, ಸರ್ಕಾರ ರಚಿಸಿದ್ದೇ ಆದರೆ, ರಾಜ್ಯದಲ್ಲಿ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾ ಮುಸ್ಲಿಮರ ವಾಪಸಾತಿಗೆ ಕ್ರಮಗಳ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಂಗ್ಲಾದೇಶದ ದಂಗೆಕೋರರನ್ನು ಮತ ಬ್ಯಾಂಕ್ ರಾಜಕಾರಣದಿಂದ ನೋಡಬಾರದು, ಏಕೆಂದರೆ ದೇಶದಲ್ಲಿ ಈಗಾಗಲೇ ಬಹುಸಂಖ್ಯೆಯ ಜನರಿದ್ದಾರೆ. ನಿತೀಶ್ ಅವರು ಎಲ್ಲಾ ಅಕ್ರಮ ಮುಸ್ಲಿಂ ವಲಸಿಗರ ಗುರ್ತಿಸಬೇಕು ಹಾಗೂ ಅವರನ್ನು ರಾಜ್ಯದಿಂದ ವಾಪಸು ಕಳುಹಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಈ ಹಿಂದೆ ಕೂಡ ಇದೇ ರೀತಿಯ ಹೇಳಿಕೆಯನ್ನು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ನೀಡಿದ್ದರು. ಎಲ್ಲಾ ಬಾಂಗ್ಲಾದೇಶಿ ಬಂಡುಕೋರರನ್ನು ಗುರುತಿಸಿ, ಅವರನ್ನು ಬಿಹಾರದಿಂದ ಹೊರಹಾಕಲಾಗುವುದು ಎಂದು ಹೇಳಿದ್ದರು.

ನೇಪಾಳದ ಗಡಿಯಲ್ಲಿರುವ ರಾಜ್ಯದ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ನುಸುಳುಕೋರರ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂದು ಬಿಜೆಪಿ ಆರೋಪಿಸುತ್ತಲೇ ಇದೆ.

ಶುಕ್ರವಾರ ಕೂಡ ಗಿರಿರಾಜ್ ಸಿಂಗ್ ಅವರು, ಗೋಡ್ಸೆ ಗಾಂಧಿಯ ಹಂತಕನಾಗಿದ್ದರೂ ಅವನೂ ಈ ದೇಶದ ಮಗ. ಅವರು ಭಾರತದಲ್ಲಿ ಜನಿಸಿದ್ದು ಔರಂಗಜೇಬ್ ಮತ್ತು ಬಾಬರ್ ನಂತೆ ಆಕ್ರಮಣಕಾರನಲ್ಲ. ಬಾಬರನ ಮಗ ಎಂದು ಯಾರು ಸಂತೋಷ ಪಡುತ್ತಾರೋ ಆ ವ್ಯಕ್ತಿ ಭಾರತ ಮಾತೆಯ ಮಗನಾಗಲು ಸಾಧ್ಯವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

'ನಿಮಗೆ ಹೃದಯಾಘಾತವಾಗಬಹುದು': ಟ್ರಂಪ್ ಶಾಂತಿ ಯೋಜನೆಯನ್ನು ತಿರಸ್ಕರಿಸಿದ ಬೆನ್ನಲ್ಲೇ ಶಸ್ತ್ರಾಸ್ತ್ರ ಪರೀಕ್ಷೆ ನಡೆಸಿದ ಇರಾನ್ ಎಚ್ಚರಿಕೆ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

SCROLL FOR NEXT