ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಜುಹು ಬೀಚ್ ನಲ್ಲಿ ನಾಲ್ವರು ಬಾಲಕರು ನೀರುಪಾಲು, ಓರ್ವನ ರಕ್ಷಣೆ!

ಮುಂಬೈನ ಜುಹು ಬೀಚ್ ಗೆ ಇಳಿದಿದ್ದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಮತ್ತೊರ್ವ ಬಾಲಕನ ರಕ್ಷಿಸಲಾಗಿದೆ.

ಮುಂಬೈ: ಮುಂಬೈನ ಜುಹು ಬೀಚ್ ಗೆ ಇಳಿದಿದ್ದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಮತ್ತೊರ್ವ ಬಾಲಕನ ರಕ್ಷಿಸಲಾಗಿದೆ.

ಪಶ್ಚಿಮ ಉಪನಗರದ ಜುಹು ಕೋಳಿವಾಡದಲ್ಲಿ ಘಟನೆ ನಡೆದಿದ್ದು, 12 ರಿಂದ 15 ವರ್ಷ ವಯಸ್ಸಿನ ಐದು ಹುಡುಗರ ತಂಡ ಸಂಜೆ 5.30ರ ಸುಮಾರಿಗೆ ಸಮುದ್ರಕ್ಕೆ ಇಳಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲು ಒಬ್ಬ ಬಾಲಕನನ್ನು ಮೀನುಗಾರ ರಕ್ಷಿಸಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಪೊಲೀಸರು, ಬಿಎಂಸಿ ವಾರ್ಡ್ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ ಎಂದು ಅವರು ಹೇಳಿದರು.

ಅಧಿಕಾರಿಗಳ ಪ್ರಕಾರ, ಹೆಚ್ಚಿನ ಅಲೆಗಳಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್‌ನ ಡೈವರ್‌ಗಳನ್ನು ಸಹ ಕಾರ್ಯಾಚರಣೆಗೆ ಸೇರಲು ವಿನಂತಿಸಲಾಗಿದೆ ಎಂದು ಅವರು ಹೇಳಿದರು.

ಜೂನ್ 15ರಂದು ಗುಜರಾತ್ ಕರಾವಳಿಗೆ ‘ಬೈಪರ್‌ಜೋಯ್’ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿರುವುದರಿಂದ ಜನರು ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT