ಒಡಿಶಾ ರೈಲು ಅಪಘಾತ 
ದೇಶ

ಒಡಿಶಾ ರೈಲು ದುರಂತ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 289ಕ್ಕೆ ಏರಿಕೆ

ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು...

ಕಟಕ್‌: ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪ್ರಯಾಣಿಕನನ್ನು ಬಿಹಾರ ನಿವಾಸಿ ಬಿಜಯ್ ಪಾಸ್ವಾನ್ ಎಂದು ಗುರುತಿಸಲಾಗಿದ್ದು, ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ ಜೂನ್ 2 ರಂದು ಅಪಘಾತ ಸಂಭವಿಸಿದ ಒಂದು ದಿನದ ನಂತರ ಜೂನ್ 3 ರಂದು ಪಾಸ್ವಾನ್ ಅವರನ್ನು ಕಟಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಾಸ್ವಾನ್ ಅವರು ಬೆನ್ನುಹುರಿ ಸೇರಿದಂತೆ ಹಲವು ಗಾಯಗಳಿಂದ ಬಳಲುತ್ತಿದ್ದರು. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಪಾಸ್ವಾನ್ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತು ಮತ್ತು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೃತರ ಸಹೋದರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT