ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ ಸಲಹೆ ನೀಡಿದ ವೈದ್ಯರು!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾದ ಕೂಡಲೇ ಆಸ್ಪತ್ರೆಗೆ ದಾಖಲಾಗಿರುವ ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ಸಲಹೆ ನೀಡದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾದ ಕೂಡಲೇ ಆಸ್ಪತ್ರೆಗೆ ದಾಖಲಾಗಿರುವ ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ಸಲಹೆ ನೀಡದ್ದಾರೆ ಎಂದು ತಿಳಿದುಬಂದಿದೆ.

ಈಗ ತಮಿಳುನಾಡಿನ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಸಚಿವರಾಗಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಜಯಲಲಿತಾ ಸಂಪುಟದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ್ದರು. 

ಬಂಧನದ ಬೆನ್ನಲ್ಲೇ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಒಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಪರಿಧಮನಿಯ ಆಂಜಿಯೋಗ್ರಾಮ್ ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೈಪಾಸ್ ಸರ್ಜರಿ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಕರೆದೊಯ್ಯುವಾಗ ಸಚಿವರು ಎದೆನೋವು ಎಂದು ದೂರಿದರು. ವೈದ್ಯಕೀಯ ವರದಿಯನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (AIIMS) ಇಡಿ ಅವರ ಅಭಿಪ್ರಾಯವನ್ನು ಕೇಳಲು ಕಳುಹಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ನುಂಗಂಬಾಕ್ಕಂನಲ್ಲಿರುವ ಇಡಿ ಕಚೇರಿಗೆ ಕರೆದೊಯ್ಯಲಾಗುತ್ತಿತ್ತು.

2018ರಲ್ಲಿ ಡಿಎಂಕೆಗೆ ಸೇರ್ಪಡೆಗೊಂಡ ಎಐಎಡಿಎಂಕೆ ಮಾಜಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರು 2011 ಮತ್ತು 2015 ರ ನಡುವೆ ಆಗಿನ ಎಐಎಡಿಎಂಕೆ ಸರ್ಕಾರದ ಅಡಿಯಲ್ಲಿ ತಮಿಳುನಾಡು ಸಾರಿಗೆ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ಮತ್ತು ಇತರರನ್ನು ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅನುಮೋದನೆ ಪಡೆದುಕೊಂಡಿತ್ತು. ಸೆಂಥಿಲ್‌ ಬಾಲಾಜಿ ಮತ್ತು ಇತರರಿಗೆ ಇಡಿ ಸಮನ್ಸ್ ಅನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ಹಿಂದಿನ ತೀರ್ಪನ್ನು ರದ್ದುಗೊಳಿಸಿದ ನಂತರ ಸುಪ್ರೀಂ ಕೋರ್ಟ್‌ನ ಆದೇಶವು ಈಗ ಬಂದಿದೆ.

ಡಿಎಂಕೆ ಸರ್ಕಾರದಲ್ಲಿ ವಿದ್ಯುತ್, ಅಬಕಾರಿ ಖಾತೆಗಳನ್ನು ಹೊಂದಿರುವ ಸೆಂಥಿಲ್‌ ಬಾಲಾಜಿ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ. ಮಂಗಳವಾರ ಅವರ ನಿವಾಸ ಮತ್ತು ಇತರ ಆಸ್ತಿಗಳಲ್ಲಿ ವ್ಯಾಪಕ ಶೋಧ ನಡೆಸಿದ ನಂತರ ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel