ಗೋವುಗಳು 
ದೇಶ

ನಾಸಿಕ್: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ, ಥಳಿತ!

ಗೋವುಗಳನ್ನು ಸಾಗಣೆ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವನನ್ನು ಗೋರಕ್ಷಕರು ಹಲ್ಲೆ ಮಾಡಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. 

ನಾಸಿಕ್:  ಗೋವುಗಳನ್ನು ಸಾಗಣೆ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವನನ್ನು ಗೋರಕ್ಷಕರು ಹಲ್ಲೆ ಮಾಡಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. 

ಲುಕ್ಮನ್ ಅನ್ಸಾರಿ ದೇಹ ಘಟಾನ್ದೇವಿಯ ಇಗತ್ಪುರಿ ಪ್ರದೇಶದಲ್ಲಿರುವ ಕೊರಕಲು ಇರುವ ಜಾಗದಲ್ಲಿ ಪತ್ತೆಯಾದಾಗ ಜೂ.10 ರಂದು ಈ ಅಪರಾಧ ಕೃತ್ಯ ಬೆಳಕಿಗೆ ಬಂದಿದೆ. ಈ ವರೆಗೂ 6 ಗೋರಕ್ಷಕರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ. ಎಲ್ಲಾ ಆರೋಪಿಗಳೂ ರಾಷ್ಟ್ರೀಯ ಬಜರಂಗದಳದೊಂದಿಗೆ ಗುರುತಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅನ್ಸಾರಿ ತನ್ನ ಇಬ್ಬರು ಸಹಾಯಕರೊಂದಿಗೆ ಜೂನ್ 8 ರಂದು ತಮ್ಮ ಟೆಂಪೋದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಥಾಣೆ ಜಿಲ್ಲೆಯ ಸಹಪುರ್‌ನ ವಿಹಿಗಾಂವ್‌ನಲ್ಲಿ ಸುಮಾರು 10-15 ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿದ್ದರು. ಬಳಿಕ ಟೆಂಪೋವನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಈ ಗುಂಪು, ನಾಲ್ಕು ಹಸುಗಳನ್ನು ರಕ್ಷಿಸಿದ್ದಾರೆ ಬಳಿಕ ವಾಹನವನ್ನು ಘಟಾನ್ದೇವಿಯ ಇಗತ್ಪುರಿ ಕಡೆಗೆ ಚಾಲನೆ ಮಾಡಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಟೆಂಪೋವನ್ನು ನಿಲ್ಲಿಸಿ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಅನ್ಸಾರಿ ಜೊತೆಯಲ್ಲಿದ್ದವರು ಹಲ್ಲೆಯಿಂದ ತಪ್ಪಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದರೆ, ಅನ್ಸಾರಿ ಸಿಕ್ಕಿಬಿದ್ದಿದ್ದಾರೆ. ಕೊರಕಲು ಪ್ರದೇಶದಲ್ಲಿ ಬಿದ್ದ ಪರಿಣಾಮ ಅನ್ಸಾರಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಗಳು ಹೇಳಿದ್ದರೆ, ಆತ ಥಳಿತದಿಂದಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಸೇರಿದಂತೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT