ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ಜೂನ್ 26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ - ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT