ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಮೂವರಿಗೆ ಗುಂಡಿಕ್ಕಿ ಹತ್ಯೆ

ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು...

ಕೋಲ್ಕತ್ತಾ: ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಭಂಗೋರ್‌ನಲ್ಲಿ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದರೆ, ಉತ್ತರ ದಿನಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಯುವಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು.

ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ತಡೆಯುತ್ತಿದ್ದು, ಹಿಂಸಾಚಾರ ನಡೆಸಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಆದರೆ ಬುಧವಾರದವರೆಗೆ ಆಡಳಿತ ಪಕ್ಷದ ಅಭ್ಯರ್ಥಿಗಳಿಗಿಂತ ಹೆಚ್ಚು ವಿರೋಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್