ಕರಾವಳಿಗೆ ಅಪ್ಪಳಿಸಿದ ಬಿಪರ್ಜೋಯ್ 
ದೇಶ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ಜೋಯ್ ಚಂಡಮಾರುತ

ಬಿಪರ್ಜೋಯ್ ಚಂಡಮಾರುತ ಗುಜರಾತ್ ನ ಸೌರಾಷ್ಟ್ರ ಮತ್ತು ಕಚ್‌ ಕರಾವಳಿ ಜಿಲ್ಲೆಗಳಿಗೆ ಗುರುವಾರ ಸಂಜೆ ಅಪ್ಪಳಿಸಿದ್ದು, ಈಗಾಗಲೇ ಅಪಾಯ ಪ್ರದೇಶಗಳಲ್ಲಿರುವ ಸುಮಾರು 94 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಕಚ್: ಬಿಪರ್ಜೋಯ್ ಚಂಡಮಾರುತ ಗುಜರಾತ್ ನ ಸೌರಾಷ್ಟ್ರ ಮತ್ತು ಕಚ್‌ ಕರಾವಳಿ ಜಿಲ್ಲೆಗಳಿಗೆ ಗುರುವಾರ ಸಂಜೆ ಅಪ್ಪಳಿಸಿದ್ದು, ಈಗಾಗಲೇ ಅಪಾಯ ಪ್ರದೇಶಗಳಲ್ಲಿರುವ ಸುಮಾರು 94 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಗುಜರಾತ್ ನ ಕರಾವಳಿ ಭಾಗದ ಎಂಟು ಜಿಲ್ಲೆಗಳಲ್ಲಿ ಬಿಪರ್ಜೋಯ್ ಚಂಡಮಾರುತದ ಪರಿಣಾಮ ಬೀರಲಿದ್ದು, ಇದು ಮಧ್ಯರಾತ್ರಿಯವರೆಗೂ ಹೆಚ್ಚು ಸಕ್ರಿಯವಾಗಿರಲಿದೆ ಎಂದು ಭಾರತೀಯ ಹವಾಮಾನಇಲಾಖೆ (ಐಎಂಡಿ) ತಿಳಿಸಿದೆ.

ಈ ಚಂಡಮಾರುತ ಹೆಚ್ಚು ತೀವ್ರವಾಗಿದ್ದು, ಕರಾವಳಿಗೆ ಅಪ್ಪಳಿಸುತ್ತಿದ್ದಂತೆ ಹಲವಾರು ಸ್ಥಳಗಳಲ್ಲಿ ಮರಗಳನ್ನು ಉರುಳಿಸಿದೆ ಮತ್ತು ಓಖಾ ಬಂದರಿನಲ್ಲಿ ಹಲವು ದೋಣಿಗಳು ಹಾನಿಗೊಳಗಾಗಿವೆ.

"ದಟ್ಟವಾದ ಮೋಡಗಳು ಕಚ್ ಮತ್ತು ದೇವಭೂಮಿ ದ್ವಾರಕಾ ಜಿಲ್ಲೆಗಳನ್ನು ಪ್ರವೇಶಿಸಿದ್ದು, ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಇದು ಮಧ್ಯರಾತ್ರಿಯವರೆಗೆ ಮುಂದುವರಿಯುತ್ತದೆ" ಎಂದು ಐಎಂಡಿ ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

"ಬಿಪರ್ಜೋಯ್ ಚಂಡಮಾರುತದ ವ್ಯಾಪ್ತಿ ಸುಮಾರು 50 ಕಿಮೀ ಆಗಿದ್ದು, ಗಂಟೆಗೆ 13-14 ಕಿಮೀ ವೇಗದಲ್ಲಿ ಚಲಿಸುತ್ತಿದೆ. ಹೀಗಾಗಿ ಸುಮಾರು ಐದು ಗಂಟೆಗಳ ಕಾಲ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಚ್ ಜಿಲ್ಲೆಯಲ್ಲಿ ಬಿಪೋರ್​​ಜಾಯ್ ಚಂಡಮಾರುತದ ಅಪ್ಪಳಿಸುವ ಮುನ್ನ ಗುಜರಾತ್‌ನ ಕರಾವಳಿ ಪ್ರದೇಶದಿಂದ ಸುಮಾರು ಒಂದು ಲಕ್ಷ ಜನರನ್ನು  ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT