ಪವನ್ ಕಲ್ಯಾಣ್ 
ದೇಶ

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್‌

2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಅಮರಾವತಿ: 2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ‘ಜನ ಸೇನಾ‘ ಪಕ್ಷವು ಸ್ಪರ್ಧಿಸಲಿದೆ ಎಂದು ಜನ ಸೇನಾ ಸಂಸ್ಥಾಪಕ ಹಾಗೂ ತೆಲುಗು ನಟ ಪವನ್ ಕಲ್ಯಾಣ್‌ ಘೋಷಿಸಿದ್ದು,  ಪೂರ್ವ ಗೋದಾವರಿ ಜಿಲ್ಲೆಯ ಕತಿಪುಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಜನ ಸೇನಾ‘ ಪಕ್ಷವು ವಿಧಾನಸಭೆಯನ್ನು ಪ್ರವೇಶಿಸಲಿದ್ದು, ಹೆಜ್ಜೆ ಗುರುತುಗಳನ್ನು ಮೂಡಿಸಲಿದೆ. ಸಾಧ್ಯವಾದಷ್ಟು ಜನರ ಪರವಾಗಿ ನಿಲುತ್ತೇವೆ ಎಂದು ಪವನ್‌ ಕಲ್ಯಾಣ್ ಹೇಳಿದ್ದಾರೆ.

ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನದ ಮೂಲಕ ಚುನಾವಣಾ ಯಾತ್ರೆ ‘ವಾರಾಹಿ‘ಯನ್ನು ಆರಂಭಿಸಲಾಗಿದೆ. ಅನ್ನವರಂನಿಂದ ಆರಂಭವಾಗಿರುವ ಜನಸೇನಾ ಯಾತ್ರೆಯು ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿ ಅಂತ್ಯಗೊಳ್ಳಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪವನ್‌ ಕಲ್ಯಾಣ್ ಸೋತ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಭೀಮಾವರಂ ಕೂಡ ಒಂದಾಗಿದೆ. ಆದರೆ ಷಡ್ಯಂತ್ರದಿಂದ ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಕಲ್ಯಾಣ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಸರಿಯಾದ ರೀತಿಯಲ್ಲಿ ಆಡಳಿತ ನಡೆಸಲಿ, ಇಲ್ಲದಿದ್ದರೆ ಮುಂದೊಂದು ದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ನೆಲದ ಮೇಲೆ ಕೂರುವಂತೆ ಮಾಡುವುದಾಗಿ ಕಲ್ಯಾಣ್ ಹೇಳಿದ್ದಾರೆ.

2019ರ ಚುನಾವಣೆಯಲ್ಲಿ ರಾಪಾಕ ವರಪ್ರಸಾದ್ ಎಂಬುವವರ ಮೂಲಕ ‘ಜನ ಸೇನಾ‘ ಕೇವಲ ಒಂದು ವಿಧಾನಸಭಾ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT