ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ಜೋಯ್ ಚಂಡಮಾರುತ: ಪ್ರಧಾನಿ ಮೋದಿಗೆ ಸಿಎಂ ಭೂಪೇಂದ್ರ ಪಟೇಲ್ ಮಾಹಿತಿ!

ಬಿಪರ್ಜೋಯ್ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದ್ದು ಮಧ್ಯರಾತ್ರಿ ನಂತರ ಇದರ ತೀವ್ರತೆ ಕಡಿಮೆಯಾಗಲಿದೆ.

ಕಚ್(ಗುಜರಾತ್): ಬಿಪರ್ಜೋಯ್ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದ್ದು ಮಧ್ಯರಾತ್ರಿ ನಂತರ ಇದರ ತೀವ್ರತೆ ಕಡಿಮೆಯಾಗಲಿದೆ.

ಬಿಪರ್ಜೋಯ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯೆ ಕ್ರಮಗಳನ್ನು ಕೈಗೊಂಡಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಪ್ರಬಲ ಚಂಡಮಾರುತ ಬಿಪರ್ಜೋಯ್ ಅಪ್ಪಳಿಸಿದ ನಂತರ ರಾಜ್ಯದ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. 

ಇತರ ವಿಷಯಗಳ ಜೊತೆಗೆ, ಕಾಡು ಪ್ರಾಣಿಗಳ, ವಿಶೇಷವಾಗಿ ಗಿರ್ ಅರಣ್ಯದಲ್ಲಿರುವ ಸಿಂಹಗಳ ಸುರಕ್ಷತೆಗಾಗಿ ರಾಜ್ಯ ಆಡಳಿತವು ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದಾರೆ. 

ಚಂಡಮಾರುತದಿಂದಾಗಿ ಸುಮಾರು 22 ಜನರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಪ್ರಾಣಹಾನಿ ಕುರಿತು ವರದಿಯಾಗಿಲ್ಲ. ಇನ್ನು 23 ಪ್ರಾಣಿಗಳು ಸಾವನ್ನಪ್ಪಿವೆ. 524 ಮರಗಳು ದರೆಗುರುಳಿದ್ದು ಕೆಲವೆಡೆ ವಿದ್ಯುತ್ ಕಂಬಗಳು ಸಹ ಬಿದ್ದಿವೆ. ಇದರಿಂದಾಗಿ 940 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಗುಜರಾತ್ ನ ಕರಾವಳಿ ಭಾಗದ ಎಂಟು ಜಿಲ್ಲೆಗಳಲ್ಲಿ ಬಿಪರ್ಜೋಯ್ ಚಂಡಮಾರುತದ ಪರಿಣಾಮ ಬೀರಲಿದ್ದು, ಇದು ಮಧ್ಯರಾತ್ರಿಯವರೆಗೂ ಹೆಚ್ಚು ಸಕ್ರಿಯವಾಗಿರಲಿದೆ ಎಂದು ಭಾರತೀಯ ಹವಾಮಾನಇಲಾಖೆ (ಐಎಂಡಿ) ತಿಳಿಸಿದೆ.

ಕಚ್ ಜಿಲ್ಲೆಯಲ್ಲಿ ಬಿಪೋರ್​​ಜಾಯ್ ಚಂಡಮಾರುತದ ಅಪ್ಪಳಿಸುವ ಮುನ್ನ ಗುಜರಾತ್‌ನ ಕರಾವಳಿ ಪ್ರದೇಶದಿಂದ ಸುಮಾರು ಒಂದು ಲಕ್ಷ ಜನರನ್ನು  ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT