ಸಂಸದ ಹಾಗೂ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ 
ದೇಶ

ಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ; ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ

ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆ ನೀಡಿದ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ರದ್ದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಬೆಂಬಿಡದೆ ಹಿಂಬಾಲಿಸಿಕೊಂಡು ಕಿರುಕುಳ ನೀಡುವ(stalking) ಆರೋಪಗಳಿಗೆ ಸಂಬಂಧಪಟ್ಟಂತೆ ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಅಪ್ರಾಪ್ತ ಬಾಲಕಿ ಆರೋಪದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸ್ ವರದಿ ಹೇಳಿದೆ. ನ್ಯಾಯಾಲಯವು ಈ ಬಗ್ಗೆ ಜುಲೈ 4ರಂದು ಮುಂದಿನ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ. 

ಕಳೆದ ಏಪ್ರಿಲ್ 28 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಸಿಂಗ್, ತನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುವುದಾಗಿ ಈ ಹಿಂದೆ ಹೇಳಿಕೊಂಡಿದ್ದರು. 

ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21 ರಂದು WFI ಮುಖ್ಯಸ್ಥರ ವಿರುದ್ಧ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಪೊಲೀಸರು ಏಪ್ರಿಲ್ 28 ರಂದು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅವರನ್ನು ಬಂಧಿಸದಿದ್ದರೆ ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಐಪಿಸಿಯ ಸಂಬಂಧಿತ ಸೆಕ್ಷನ್‌ಗಳೊಂದಿಗೆ ಪೋಕ್ಸೊ ಕಾಯ್ದೆಯಡಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕಿಯ ಆರೋಪದ ಆಧಾರದ ಮೇಲೆ ಅದನ್ನು ದಾಖಲಿಸಲಾಗಿದೆ. ನಮ್ರತೆಯ ಉಲ್ಲಂಘನೆಗೆ ಸಂಬಂಧಿಸಿದ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕುಸ್ತಿಪಟುಗಳು ದಾಖಲಿಸಿದ ದೂರುಗಳ ಆಧಾರದ ಮೇಲೆ ಭೂಷಣ್ ಸಿಂಗ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ(Wrestlers Protest) ತಮ್ಮ ಮಾತುಕತೆಯ ಸಂದರ್ಭದಲ್ಲಿ ಜೂನ್ 15 ರೊಳಗೆ ಪ್ರಕರಣದ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT