ಜೈಪುರ: ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತರಾಗಬಾರದು, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರ ನಡವಳಿಕೆಯಲ್ಲಿ ಬದಲಾಗಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಜಯಗಳಿಸಿದ ನಂತರ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಕಳಪೆ ಪ್ರದರ್ಶನದ ಅಂಶವನ್ನು ಅವರು ಒತ್ತಿ ಹೇಳಿದ್ದಾರೆ.
ಸಾಹಿತ್ಯ ಉತ್ಸವ ಸಮಾರೋಪ ಸಮಾರಂಭ ವೇಳೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಶಶಿ ತರೂರ್ , ಒಂದು ರಾಜ್ಯದಲ್ಲಿ ಗೆದ್ದ ಮಾತ್ರಕ್ಕೆ ಅದು ರಾಷ್ಟ್ರೀಯವಾಗಿ ಕೆಲಸ ಮಾಡಬಹುದು ಎಂದು ಊಹಿಸಲು ಸಾಧ್ಯವಿಲ್ಲ. 2018ರಲ್ಲಿ ಕರ್ನಾಟಕದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಲ್ಲದೇ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಘಡ ಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವು.ಆದರೆ, ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಲ್ಲಿ ಬಿಜೆಪಿ ನಮಗೆ ತಿರುಗೇಟು ನೀಡಿತ್ತು. ಕರ್ನಾಟಕದಲ್ಲೂ ಕೇವಲ ಒಂದೇ ಒಂದೇ ಸ್ಥಾನ ನಮಗೆ ಸಿಕ್ಕಿತ್ತು ಎಂದು ಹೇಳಿದರು.
ಇದನ್ನೂ ಓದಿ: 2024 ರ ಲೋಕಸಭೆ ಚುನಾವಣೆ: ಜಾತಿ ಗಣತಿ ವರದಿ ಕಾಂಗ್ರೆಸ್ ಸರ್ಕಾರದ ಪಾಲಿಗೆ ಆಗಲಿದೆಯೇ ಸಮಸ್ಯೆಗಳ ಸರಮಾಲೆ?
ಈ ವರ್ಷದ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತು, ಬಿಜೆಪಿ 66 ಸ್ಥಾನಗಳನ್ನು ಗಳಿಸಿತು. ಕರ್ನಾಟಕದಲ್ಲಿ ಪ್ರಬಲ ಮತ್ತು ಪರಿಣಾಮಕಾರಿ ಸ್ಥಳೀಯ ನಾಯಕತ್ವವನ್ನು ಹೊಂದಿದ್ದು ಮತ್ತು ಸ್ಥಳೀಯ ಸಮಸ್ಯೆಗಳಿಗೆ ಒತ್ತು ನೀಡಿದ್ದು ಕಾಂಗ್ರೆಸ್ ಗೆಲುವಿಗೆ ಕಾರಣವಾಯಿತು ಎಂದು ಅವರು ತಿಳಿಸಿದರು.