ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ' ಎಂದಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, 'ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು' ಎಂದರು.

ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT