ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ' ಎಂದಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, 'ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು' ಎಂದರು.

ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT