ಸೆಂಥಿಲ್ ಬಾಲಾಜಿ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್ 
ದೇಶ

ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಖಾತೆಗಳನ್ನು ಇತರ ಸಚಿವರಿಗೆ ಮರು ಹಂಚಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಲಾಯದಿಂದ ಬಂಧನಕ್ಕೊಳಗಾಗಿರುವ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರಿಸಲು ರಾಜ್ಯಪಾಲರು "ಸಮ್ಮತಿ ನೀಡಿಲ್ಲ".  ಏಕೆಂದರೆ ಅವರು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎಂದು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಾಜಿ ಅವರ ಬಳಿ ಇದ್ದ ಇಂಧನ ಹಾಗೂ ಅಬಕಾರಿ ಖಾತೆಗಳನ್ನು ತಂಗಮ್‌ ತೆನ್ನರಸು ಹಾಗೂ ಎಸ್‌ ಮುತ್ತುಸ್ವಾಮಿ ಅವರಿಗೆ ಮರು ಹಂಚಿಕೆ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಬಂಧಿತ ತಮಿಳುನಾಡು ಅಬಕಾರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈ ನ ಸ್ಥಳೀಯ ನ್ಯಾಯಾಲಯ ಜೂ.28 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT