ವಿ.ಡಿ ಸಾವರ್ಕರ್ 
ದೇಶ

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಪಣಜಿ: ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಹಿಂದೂತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಗೋವಾದಲ್ಲಿ ಕಾರ್ಯಕ್ರಮದಲ್ಲಿ ಸುದ್ದಿಸಂಸ್ಥೆಯೊಂದಿಗೆ ಈ ಕುರಿತು ಮಾತನಾಡಿ, 'ಸಾವರ್ಕರ್ ಕುರಿತ ಅಧ್ಯಾಯವನ್ನು ಅಳಿಸುವ ಮೂಲಕ ಅವರು ಸಾವರ್ಕರ್ ಬಗ್ಗೆ ಕಲಿಯುವ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಸಿದುಕೊಳ್ಳಬಹುದು ಎಂದು ಕಾಂಗ್ರೆಸ್ ಭಾವಿಸಬಹುದು. ಆದರೆ ವಿದ್ಯಾರ್ಥಿಗಳು ತುಂಬಾ ತೀಕ್ಷ್ಣರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಅವರ ಕುರಿತು ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಸಾವರ್ಕರ್ ಸ್ಮಾರಕ ಅವರ ಸಾಹಿತ್ಯವನ್ನು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ನಾವು ಅವುಗಳನ್ನು ಕನ್ನಡದಲ್ಲೂ ಪ್ರಕಟಿಸುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಪಠ್ಯಕ್ರಮದಿಂದ ಅಧ್ಯಾಯವನ್ನು ಅಳಿಸಿದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ. ವಾಸ್ತವವಾಗಿ, ನೀವು ಹೆಚ್ಚು ನಿಗ್ರಹಿಸಿದರೆ, ಅದು ಹೆಚ್ಚು ಮರುಕಳಿಸುತ್ತದೆ ಎಂದು ನಾನು ಹೇಳುತ್ತೇನೆ. ಅದು ನೈಸರ್ಗಿಕ ಪ್ರತಿಕ್ರಿಯೆಯಾಗಿದೆ. ಪ್ರತಿ ಕ್ರಿಯೆಯು ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆಯನ್ನು ಹೊಂದಿರುತ್ತದೆ ಎಂದು ಅವರು ನ್ಯೂಟನ್ ನ ಮೂರನೇ ನಿಯಮವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಈ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿ 6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಅನುಮೋದಿಸಿದ್ದು, ಆರೆಸ್ಸೆಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಮತ್ತು ವಿಡಿ ಸಾವರ್ಕರ್ ಸೇರಿದಂತೆ ಇತರರ ಅಧ್ಯಾಯಗಳನ್ನು ತೆಗೆದುಹಾಕುವ ಮೂಲಕ ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT