ಘಟನಾ ಸ್ಥಳದಲ್ಲಿರುವ ಪೊಲೀಸರು. 
ದೇಶ

ಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು

ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.

ಜುನಾಗಢ್‌ (ಗುಜರಾತ್): ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.

ಅಕ್ರಮವಾಗಿ ದರ್ಗಾ ನಿರ್ಮಾಣ ಮಾಡಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ದರ್ಗಾ ತೆರವುಗೊಳಿಸಲು ಗಡುವು ನೀಡುವ ಸಲುವಾಗಿ ನೋಟಿಸ್ ಅಂಟಿಸಲು ಸ್ಥಳಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಪೊಲೀಸರು ಕೂಡ ಜೊತೆಯಾಗಿ ಬಂದಿದ್ದರು. ಈ ವಿಚಾರ ತಿಳಿದು ಸುಮಾರು 200-300 ಜನರು ದರ್ಗಾ ಬಳಿ ಬಂದಿದ್ದು, ಏಕಾಏಕಿ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟದಿಂದ ಡಿಎಸ್‌ ಪಿ ಸೇರಿದಂತೆ ಹಲವು ಪೊಲೀಸ್‌ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಇನ್ನಷ್ಟು ಪೊಲೀಸ್‌ ಪಡೆ ದೌಡಾಯಿಸಿ ಆಶ್ರುವಾಯುಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಘಟನೆ ಸಂಬಂಧ ಈವರೆಗೂ 174 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಇನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎನ್ನಲಾದ ಕಟ್ಟಡ ತೆರವಿಗೆ ಅಧಿಕಾರಿಗಳು 5 ದಿನಗಳ ಗಡುವನ್ನು ನೀಡಿದ್ದಾರೆ. ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡಿದ್ದೇ ಆದರೆ, ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನೀಡುವಂತೂ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್: ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ; ನಿಖಿಲ್

SCROLL FOR NEXT