ಒಡಿಶಾದ ರಾಯಗಢದಲ್ಲಿ ಹಳಿತಪ್ಪಿದ ಗೂಡ್ಸ್ ರೈಲಿನ ನಾಲ್ಕು ಭೋಗಿಗಳು 
ದೇಶ

ಒಡಿಶಾ: ಹಳಿತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು, ಬಾಲಸೋರ್‌ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್‌ನಲ್ಲಿರುವ ವೇದಾಂತ ಲಿಮಿಟೆಡ್‌ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಭುವನೇಶ್ವರ: ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್‌ನಲ್ಲಿರುವ ವೇದಾಂತ ಲಿಮಿಟೆಡ್‌ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಒಡಿಶಾದ ರಾಯಗಢದ ಅಂಬಾಡೋಲಾದಿಂದ ವಿಶೇಷ ಮಾರ್ಗದಲ್ಲಿ ಈ ಗೂಡ್ಸ್ ರೈಲು ಘಟಕಕ್ಕೆ ತೆರಳುತ್ತಿತ್ತು.

ಒಡಿಶಾದ ಬಾಲಸೋರ್‌ನಲ್ಲಿ ಕನಿಷ್ಠ 291 ಜನರು ಸಾವಿಗೀಡಾದ ತ್ರಿವಳಿ ರೈಲು ಅಪಘಾತದ ಕೆಲವು ವಾರಗಳ ನಂತರ ಈ ಅಪಘಾತ ಸಂಭವಿಸಿದೆ. ಜೂನ್ 2 ರಂದು ನಡೆದ ಈ ದುರಂತ ಘಟನೆಯಲ್ಲಿ ಚೆನ್ನೈ- ಕೋರಮಂಡಲ್ ಎಕ್ಸ್‌ಪ್ರೆಸ್, ಹೌರಾ- ಶಾಲಿಮಾರ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.

ಈಮಧ್ಯೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೂನ್ 21ರಂದು ಒಡಿಶಾದ ಬಾಲಸೋರ್‌ಗೆ ಭೇಟಿ ನೀಡಲಿದ್ದು, ರೈಲು ಅಪಘಾತದ ಕಠಿಣ ಸಮಯದಲ್ಲಿ ರಕ್ಷಣೆಗೆ ಬಂದ ವೈದ್ಯರು, ದಾದಿಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಭೇಟಿಯಾಗಿ ಧನ್ಯವಾದ ಹೇಳಲಿದ್ದಾರೆ.

ರೈಲ್ವೆ ಸಚಿವರು ಈ ಪ್ರದೇಶದ ಸಾರ್ವಜನಿಕ ಆಡಳಿತ ಇಲಾಖೆಯನ್ನು ಭೇಟಿ ಮಾಡಲಿದ್ದಾರೆ ಮತ್ತು ಉದಾರವಾಗಿ ನೆರವು ನೀಡಿದ ಸ್ಥಳೀಯ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲು ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ 291ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT