ಖೂಷ್ಬೂ ಸುಂದರ್, ಶಿವಾಜಿ ಕೃಷ್ಣಮೂರ್ತಿ 
ದೇಶ

ಖುಷ್ಬೂ ಸುಂದರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಡಿಎಂಕೆ ಉಚ್ಛಾಟಿತ ನಾಯಕ ಶಿವಾಜಿ ಕೃಷ್ಣಮೂರ್ತಿ ಬಂಧನ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಮೂರ್ತಿ ಅವರ ವಿವಾದಾತ್ಮಕ ಹೇಳಿಕೆ ವ್ಯಾಪಕ ಟೀಕೆಗಳಿಗೆ ಗುರಿಯಾಗಿತ್ತು. ಕೀಳುಮಟ್ಟದ ಹೇಳಿಕೆ ನೀಡಿರುವುದು ದೃಢಪಟ್ಟ ನಂತರ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಖುಷ್ಬೂ ಸುಂದರ್ ಅವರ ಬಗ್ಗೆ ಟೀಕೆ ಮಾಡಿದ ಆರೋಪದ ಮೇಲೆ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ.

ಅಲ್ಲದೇ, ರಾಜ್ಯಪಾಲ ರವಿ ಅವರನ್ನು ಅವಹೇಳನ ಮಾಡಿರುವ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದ ಬಿಜೆಪಿಯ ಅಮರ್ ಪ್ರಸಾದ್ ರೆಡ್ಡಿ, ಪೊಲೀಸರಿಗೆ ಡಿಎಂಕೆ ವಕ್ತಾರರ ವಿರುದ್ಧ ದೂರು ನೀಡಿದ್ದರು. ಇದಾದ ಕೆಲ ಗಂಟೆಗಳ ನಂತರ  ಟ್ವೀಟ್ ಮಾಡಿ, ಸುದ್ದಿಗೋಷ್ಠಿ ನಡೆಸಿದ ಖುಷ್ಬೂ ಸುಂದರ್, ಕಣ್ಣೀರು ಹಾಕಿದರು. ಈಗಾಗಲೇ ರಾಷ್ಟ್ರೀಯ ಹಾಗೂ ತಮಿಳುನಾಡು ರಾಜ್ಯ ಮಹಿಳಾ ಆಯೋಗ ಸಂಪರ್ಕಿಸಿದ್ದು, ಭಯಪಡದಂತೆ ಎನ್ ಸಿಡಬ್ಲ್ಯೂ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದರು.

ಮಹಿಳೆಯರನ್ನು ನಿಂದಿಸುವುದು, ಅವರ ಬಗ್ಗೆ ಅಸಭ್ಯವಾದ ಹೇಳಿಕೆ ನೀಡುವುದು ಡಿಎಂಕೆ ನಾಯಕರ ಚಾಳಿಯಾಗಿದೆ. ಇಂತಹ ಗೂಂಡಾಗಳಿಗೆ ಡಿಎಂಕೆ ಸುರಕ್ಷಿತ ತಾಣವಾಗಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಸ್ಟಾಲಿನ್ ಗೆ ತಮ್ಮ ಟ್ವೀಟ್ ನ್ನು ಖುಷ್ಬೂ ಟ್ಯಾಗ್ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT