ರಾಗಿಣಿ ನಾಯಕ್ 
ದೇಶ

ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ನಿವಾಸದಲ್ಲಿ ಕಳ್ಳತನ; ಬೆಳ್ಳಿಯ ವಿಗ್ರಹಗಳು ನಾಪತ್ತೆ!

ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ. ಕಳ್ಳತನದ ನಂತರ ಎರಡು ಬೆಳ್ಳಿಯ ಗಣೇಶನ, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ. 

ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿರುವ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ.

ಕಳ್ಳತನದ ನಂತರ ಎರಡು ಬೆಳ್ಳಿಯ ಗಣೇಶನ ವಿಗ್ರಹಗಳು, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್ ನಾಪತ್ತೆಯಾಗಿದೆ ಎಂದು ವರದಿಯಾಗಿದೆ. ಮಾಹಿತಿ ಪಡೆದ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ನಾಯಕ್ ಅವರು ಇತ್ತೀಚೆಗಷ್ಟೇ ಅಶೋಕ್ ವಿಹಾರಕ್ಕೆ ಸ್ಥಳಾಂತರಗೊಂಡಿರುವುದು ಗಮನಾರ್ಹ. ಮೊದಲು ಅವರು ಕೇಶವ ಪುರಂನಲ್ಲಿ ವಾಸವಿದ್ದರು.

ನಾಯಕ್ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಸದ್ಯ, ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT