ಮಮತಾ ಬ್ಯಾನರ್ಜಿ 
ದೇಶ

ರಾಜ್ಯಪಾಲರಿಂದ ಏಕಪಕ್ಷೀಯವಾಗಿ ಬಂಗಾಳ ಸ್ಥಾಪನಾ ದಿನಾಚರಣೆ ಘೋಷಣೆ: ಮಮತಾಗೆ ಶಾಕ್!

ಪಶ್ಚಿಮ ಬಂಗಾಳದ ರಾಜ್ಯಪಾಲರು ರಾಜ್ಯದ ಸ್ಥಾಪನಾ ದಿನಾಚರಣೆಯನ್ನು ಏಕಪಕ್ಷೀಯವಾಗಿ ಘೋಷಣೆ ಮಾಡಿರುವುದಕ್ಕೆ ಮಮತಾ ಬ್ಯಾನರ್ಜಿ ಅಘಾತ ವ್ಯಕ್ತಪಡಿಸಿದ್ದಾರೆ.  

ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜ್ಯಪಾಲರು ರಾಜ್ಯದ ಸ್ಥಾಪನಾ ದಿನಾಚರಣೆಯನ್ನು ಏಕಪಕ್ಷೀಯವಾಗಿ ಘೋಷಣೆ ಮಾಡಿರುವುದಕ್ಕೆ ಮಮತಾ ಬ್ಯಾನರ್ಜಿ ಅಘಾತ ವ್ಯಕ್ತಪಡಿಸಿದ್ದಾರೆ.  

ಜೂ.20 ರಂದು ಬಂಗಾಳ ರಾಜ್ಯ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಇದನ್ನು ರಾಜ್ಯಪಾಲ ಸಿವಿ ಆನಂದ ಬೋಸ್ ಘೋಷಿಸಿದ್ದರು. ಬಂಗಾಳದ ವಿಭಜನೆಯಿಂದ ಇಲ್ಲಿನ ಜನತೆಗೆ ಎಷ್ಟು ನೋವಾಗಿತ್ತೆಂದರೆ ಸ್ವಾತಂತ್ರ್ಯ ಬಂದ ನಂತರವೂ ಸಹ ರಾಜ್ಯದಲ್ಲಿ ರಾಜ್ಯ ಸ್ಥಾಪನಾ ದಿನವನ್ನು ಯಾರೂ ಆಚರಿಸಿಲ್ಲ ಎಂದು ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, "ನೀವು ಯಾವುದನ್ನು ರಾಜ್ಯ ಸಂಸ್ಥಾಪನಾ ದಿನ ಎಂದು ಹೇಳುತ್ತಿದ್ದೀರೋ ಆ ದಿನವನ್ನು ಆಚರಿಸಲು ಜೂ.20 ರಂದು ಕೋಲ್ಕತ್ತಾದಲ್ಲಿನ ರಾಜಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದಕ್ಕೆ ನಿರ್ಧರಿಸಿರುವುದನ್ನು ಕೇಳಿ ನನಗೆ ಅಘಾತ ಉಂಟಾಗಿದೆ" ಎಂದು ಹೇಳಿದ್ದಾರೆ.

ಹಿಂದಿನ ದಿನದ ದೂರವಾಣಿ ಚರ್ಚೆಯ ಸಂದರ್ಭದಲ್ಲಿ, ಬೋಸ್ ಅವರು "ಏಕಪಕ್ಷೀಯ ಮತ್ತು ಸಮಾಲೋಚನೆಯಿಲ್ಲದ ನಿರ್ಧಾರ" ವನ್ನು ರಾಜ್ಯದ ಸಂಸ್ಥಾಪನಾ ದಿನವೆಂದು ಘೋಷಿಸಲು ಸಮರ್ಥನೀಯವಲ್ಲ ಎಂದು ಒಪ್ಪಿಕೊಂಡಿದ್ದರು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

1947 ರಲ್ಲಿ ಅವಿಭಜಿತ ಬಂಗಾಳ ರಾಜ್ಯವನ್ನು ಇಬ್ಭಾಗ ಮಾಡಿ ಪಶ್ಚಿಮ ಬಂಗಾಳವನ್ನಾಗಿ ಮಾಡಲಾಯಿತು ಇದು ಅತ್ಯಂತ ನೋವಿನ ಹಾಗೂ ಆಘಾತಕಾರಿ ಪ್ರಕ್ರಿಯೆಯಾಗಿತ್ತು ಎಂದು ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT