ಗುಂಡಿಕ್ಕಿ ಹತ್ಯೆ (ಸಂಗ್ರಹ ಚಿತ್ರ) 
ದೇಶ

ಮೈನ್ಪುರಿ: ಕಸ ಹಾಕುವ ವಿಚಾರವಾಗಿ ಜಗಳ: ಗುಂಡೇಟಿಗೆ ಒಂದೇ ಕುಟುಂಬದ ಮೂವರ ಬಲಿ!

ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.

ಲಖನೌ: ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.

ಅತಿರಾಮ್ಪುರ್ ಎಂಬ ಗ್ರಾಮದಲ್ಲಿ ರಸ್ತೆ ಮೇಲೆ ಕಸ ಸುರಿದಿದ್ದಕ್ಕೆ ಕೆಲವು ಮಂದಿಯ ನಡುವೆ ಈ ಘರ್ಷಣೆ ಆರಂಭವಾಗಿತ್ತು ಎಂದು ಎಸ್ ಪಿ ವಿನೋದ್ ಕುಮಾರ್ ಹೇಳಿದ್ದಾರೆ.

ವಿವಾದ ತೀವ್ರಸ್ವರೂಪ ಪಡೆದುಕೊಂಡು ಓರ್ವ ವ್ಯಕ್ತಿ ಕಯಾಮ್ ಸಿಂಗ್ (85) ರಾಮೇಶ್ವರ್ ಸಿಂಗ್ (75) ಮಮತಾ ದೇವಿ (28) ನ್ನು ಹತ್ಯೆ ಮಾಡಿದ್ದಾನೆ. ಸರೋಜಿನಿ ದೇವಿ ಎಂಬುವವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಆರೋಪಿ ರಾಹುಲ್ ಯಾದವ್ ಪತ್ತೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಕುಮಾರ್ ಹೇಳಿದರು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT