ಬಿಜೆಪಿ ಸಂಸದ ಸೋಯಂ ಬಾಪುರಾವ್ 
ದೇಶ

ಮನೆ ಕಟ್ಟೋಕೆ, ಮಗನ ಮದುವೆಗೆ ಸಂಸದರ ನಿಧಿ ಬಳಕೆ: ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ವೈರಲ್

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಮನೆ ಕಟ್ಟೋಕೆ, ಮಗನ ಮದುವೆಗೆ ಬಳಸಿಕೊಂಡೆ ಎಂಬ ಬಿಜೆಪಿ ಸಂಸದರೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ಸಂಸದ ಸೋಯಂ ಬಾಪು ರಾವ್ ಅವರದ್ದು ಎನ್ನಲಾದ ವಿಡಿಯೋ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಹೈದ್ರಾಬಾದ್: ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಮನೆ ಕಟ್ಟೋಕೆ, ಮಗನ ಮದುವೆಗೆ ಬಳಸಿಕೊಂಡೆ ಎಂಬ ಬಿಜೆಪಿ ಸಂಸದರೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ಸಂಸದ ಸೋಯಂ ಬಾಪು ರಾವ್ ಅವರದ್ದು ಎನ್ನಲಾದ ವಿಡಿಯೋ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ತೆಲಂಗಾಣದ ಆದಿಲಾಬಾದ್ ನಲ್ಲಿ ಬಿಜೆಪಿ ಸ್ಥಳೀಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಬಾಪುರಾವ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನಾ ನಿಧಿಯಲ್ಲಿ ಎರಡನೇ ಬಾರಿಗೆ ನನಗೆ 2.5 ಕೋಟಿ ರೂ. ಬಂದಿತ್ತು. ಅದರಲ್ಲೊಂದಿಷ್ಟು ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಉಳಿದಿದ್ದನ್ನು ಮನೆ ಕಟೋಕೆ ಮತ್ತು ಮಗನ ಮದುವೆ ಮಾಡುವುದಕ್ಕೆ ಬಳಸಿಕೊಂಡೆ ಎಂದು ಹೇಳಿರುವುದು ವಿಡಿಯೋದಲ್ಲಿದೆ.

'ಕ್ಷೇತ್ರದಲ್ಲಿ ನನಗೆ ಮನೆ ಇಲ್ಲದ ಕಾರಣ ಸ್ವಲ್ಪ ಹಣವನ್ನು ಮನೆ ನಿರ್ಮಾಣಕ್ಕೆ ಬಳಸಿದ್ದೇನೆ. ಬೇರೆ ಯಾವ ನಾಯಕರೂ ಇದನ್ನು ಒಪ್ಪಿಕೊಳ್ಳುವುದಿಲ್ಲ, ಆದರೆ ನಾನು ಒಪ್ಪಿಕೊಳ್ಳುತ್ತೇನೆ. ನನ್ನ ಮಗನ ಮದುವೆಗೂ ಆ ಹಣವನ್ನು ಬಳಸಿದ್ದೇನೆ" ಎಂದು ಅವರು ಹೇಳಿದ್ದಾರೆ. ಈ ಹಿಂದೆ ಬಾಪುರಾವ್ ಬುಡಕಟ್ಟು ಸಮುದಾಯದ ಹೆಣ್ಣುಮಕ್ಕಳನ್ನು ಹಿಂಬಾಲಿಸುವ ಮುಸ್ಲಿಂ ಯುವಕರ ತಲೆ ಕತ್ತರಿಸಬೇಕು ಎಂದು ಹೇಳಿ ಸುದ್ದಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

SCROLL FOR NEXT