ಜೋ ಬೈಡನ್-ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಅಮೆರಿಕ ಪ್ರವಾಸ: ಜೋ ಬೈಡನ್ ಜೊತೆ ಮಾತುಕತೆಯಲ್ಲಿ ರಕ್ಷಣೆ, ತಾಂತ್ರಿಕ ಒಪ್ಪಂದಗಳಿಗೆ ಒತ್ತು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸಕ್ಕಾಗಿ ಇಂದು ಮಂಗಳವಾರ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಭಾರತೀಯ ಅಮೆರಿಕನ್ ತಂಡವು ಪ್ರಧಾನಿಯವರನ್ನು ಸ್ವಾಗತಿಸಲಿದೆ.

ನವದೆಹಲಿ/ವಾಷಿಂಗ್ಟನ್ ಡಿಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸಕ್ಕಾಗಿ ಇಂದು ಮಂಗಳವಾರ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಭಾರತೀಯ ಅಮೆರಿಕನ್ ತಂಡವು ಪ್ರಧಾನಿಯವರನ್ನು ಸ್ವಾಗತಿಸಲಿದೆ.

ಭೇಟಿಯ ಉದ್ದೇಶ: ಜೂನ್ 21 ರಿಂದ ಪ್ರಾರಂಭವಾಗುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯುಎಸ್ ಭೇಟಿಯ ಸಮಯದಲ್ಲಿ ರಕ್ಷಣಾ ಸಹಕಾರವನ್ನು ಹೆಚ್ಚಿಸುವುದು, ಸಹ-ಉತ್ಪಾದನೆ, ಸಹ-ಅಭಿವೃದ್ಧಿ ಮತ್ತು ಪೂರೈಕೆ ಬದಲಾವಣೆಯನ್ನು ನಿರ್ವಹಿಸುವಲ್ಲಿ ನಿಕಟ ಪಾಲುದಾರಿಕೆಗಾಗಿ ಈ ವಲಯದ ಕೈಗಾರಿಕೆಗಳಿಗೆ ಮಾರ್ಗಸೂಚಿಯನ್ನು ಅನಾವರಣಗೊಳಿಸಲು ಉಭಯ ನಾಯಕರು ಉತ್ಸುಕರಾಗಿದ್ದಾರೆ.

ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ಸುಧಾರಿಸುವುದರ ಜೊತೆಗೆ ಟೆಲಿಕಾಂ, ಬಾಹ್ಯಾಕಾಶ ಮತ್ತು ಉತ್ಪಾದನೆಯನ್ನು ಒಳಗೊಂಡಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಿಕಟ ಸಂಬಂಧಗಳನ್ನು ಬೆಳೆಸುವ ಕುರಿತು ಚರ್ಚೆ ಪ್ರಧಾನಿ ಮೋದಿ ಅವರು ಯುಎಸ್ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನಡೆಸಲಿದ್ದಾರೆ.

ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಜೂನ್ 24 ಮತ್ತು 25ರಂದು ಈಜಿಪ್ಟ್‌ಗೆ ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ಅವರು 11ನೇ ಶತಮಾನದ ಮಸೀದಿ ಅಲ್-ಹಕೀಮ್ ಗೆ ಭೇಟಿ ನೀಡಲಿದ್ದಾರೆ. ಇದನ್ನು ಬೋಹ್ರಾ ಸಮುದಾಯ ನವೀಕರಿಸಿದೆ.

ರಕ್ಷಣಾ ಕೈಗಾರಿಕಾ ಸಹಕಾರ ಮಾರ್ಗಸೂಚಿಯು ಪ್ರಧಾನಿ ಮೋದಿಯವರ ಅಮೆರಿಕ ಭೇಟಿಯ ಪ್ರಮುಖ ಅಜೆಂಡಾಗಳಲ್ಲಿ ಒಂದಾಗಲಿದೆ ಎಂದು ವಿದೇಶಾಂಗ ಕಾರ್ಯದರ್ಶಿಗಳು ಹೇಳಿದ್ದಾರೆ.

ಇದು ಮೂಲಭೂತವಾಗಿ ರಕ್ಷಣಾ ಸಹ-ಉತ್ಪಾದನೆ ಮತ್ತು ಸಹ-ಅಭಿವೃದ್ಧಿಯ ಎಲ್ಲಾ ಅಂಶಗಳ ಮೇಲೆ ಕೇಂದ್ರೀಕರಿಸುತ್ತದೆ. ಇದು ಎರಡು ದೇಶಗಳ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಗಳು ಹೇಗೆ ಉತ್ತಮವಾಗಿ ಸಹಕರಿಸಬಹುದು, ರಕ್ಷಣಾ ಉದ್ಯಮದ ಕ್ಷೇತ್ರದಲ್ಲಿ ಸರಬರಾಜು ಮಾರ್ಗಗಳು ಪರಸ್ಪರ ಹೇಗೆ ಸಂಪರ್ಕ ಸಾಧಿಸಬಹುದು ಎಂಬುದರ ಬಗ್ಗೆಯೂ ಚರ್ಚಿಸಿ ವಿಮರ್ಶೆ ಮಾಡಿಕೊಳ್ಳಲಿದೆ. 

ಇದೇ ಸಂದರ್ಭದಲ್ಲಿ ಕ್ವಾತ್ರಾ ಅವರು ರಕ್ಷಣಾ ಸಹಕಾರವನ್ನು ಅಮೆರಿಕ ಜೊತೆಗಿನ ಭಾರತದ ಸಂಬಂಧದ ಪ್ರಮುಖ ಸ್ತಂಭ ಎಂದು ಬಣ್ಣಿಸಿದರು.

ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಹಿಂಸಾಚಾರವನ್ನು ಪ್ರಚೋದಿಸುವ ಪ್ರಯತ್ನಗಳಂತಹ ಘಟನೆಗಳಿಂದ ಎದುರಾದ ಸವಾಲುಗಳು ಭಾರತ ಮತ್ತು ಅಮೆರಿಕ ನಾಯಕರ ಮನಸ್ಸಿನಲ್ಲಿದ್ದು ಆ ಬಗ್ಗೆ ಚರ್ಚೆ, ಮಾತುಕತೆಯಾಗಲಿದಿಯೇ ಎಂಬುದು ಕುತೂಹಲಕಾರಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ