ನರೇಂದ್ರ ಮೋದಿ 
ದೇಶ

ವಿದೇಶ ಪ್ರವಾಸದಿಂದ ಪಿಎಂ ಮರಳಿದ ಕೂಡಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ; ರಾಜ್ಯ ವಿರೋಧ ಪಕ್ಷದ ನಾಯಕನ ಆಯ್ಕೆ?

ಈ ವರ್ಷದ ಆಂತ್ಯಕ್ಕೆ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ವರ್ಚಸ್ಸು ತುಂಬಲು ಮುಂದಾಗಿರುವ ಕೇಂದ್ರ ಸರ್ಕಾರ ಸದ್ಯದಲ್ಲೇ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಈ ವರ್ಷದ ಆಂತ್ಯಕ್ಕೆ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ವರ್ಚಸ್ಸು ತುಂಬಲು ಮುಂದಾಗಿರುವ ಕೇಂದ್ರ ಸರ್ಕಾರ ಸದ್ಯದಲ್ಲೇ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ವಿಧಾನಸಭೆಯ ಫಲಿತಾಂಶದ ಹಿನ್ನೆಲೆಯಲ್ಲಿ ಬಿಜೆಪಿಯೊಳಗೆ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ, ಈ ಸಂಬಂಧ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಬಿಎಲ್ ಸಂತೋಷ್ ಸೇರಿದಂತೆ ಪಕ್ಷದ ಉನ್ನತ ನಾಯಕರು  ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂಬಂದ ಪಕ್ಷದ ಯಾವೋಬ್ಬ ನಾಯಕರು ಅಧಿದೃತವಾಗಿ ವಿಷಯ ಬಹಿರಂಗ ಪಡಿಸಿಲ್ಲ, ರಾಜಸ್ಥಾನ ವಿಧಾನಸಭಾ ಚುನಾವಣೆ ಮತ್ತು ಲೋಕಸಭೆ ಚುನಾವಣೆ ರಾಜಕೀಯ ಅಜೆಂಡಾಗಳ ಮೇಲೆ ನಡೆಯುತ್ತಿರುವ ವಿಶೇಷ ಪ್ರಚಾರ ಕಾರ್ಯಕ್ರಮದ ಪ್ರಕ್ರಿಯೆ ಮುಗಿದ ಮೇಲೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪಕ್ಷದ ಮೂಲಗಳು ಸುಳಿವು ನೀಡಿವೆ.

ಆರೆಸ್ಸೆಸ್‌ನ ಹಿರಿಯ ಪ್ರತಿನಿಧಿಯೊಂದಿಗೆ ಸೋಮವಾರದ ಸಭೆಯಲ್ಲಿ ಭಾಗವಹಿಸಿದ್ದ ನಮ್ಮ ಪಕ್ಷದ ಪ್ರಮುಖರು ರಾಜಸ್ಥಾನದಲ್ಲಿ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಳ್ಳುವುದು ಮತ್ತು ಸಂಸದರಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವುದು ಹೇಗೆ ಎಂಬುದರ ಕುರಿತು ಚರ್ಚಿಸಿರಬಹುದು ಎಂದು ನಾವು ಊಹಿಸುತ್ತೇವೆ. ಮತ್ತು ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸದಿಂದ ವಾಪಾಸದ ನಂತರ ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮತ್ತೊಬ್ಬ ಬಿಜೆಪಿ ಹಿರಿಯ ನಾಯಕರು ತಿಳಿಸಿದ್ದಾರೆ. ಕೇಂದ್ರ ಸಚಿವರಿಗೆ ರಾಜ್ಯ ಚುನಾವಣೆಗಳ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾಯಕರುಗಳಿಗೆ ವಿವಿಧ ಚುನಾವಣಾ ಜವಾಬ್ದಾರಿ ನೀಡಲು ಪಕ್ಷದಲ್ಲಿ ನಾಲ್ಕರಿಂದ ಐದು ಹೊಸ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸುವ ಬಗ್ಗೆ ನಾಯಕರು ಚರ್ಚಿಸಿದ್ದಾರೆ ಎಂದು ಮೂಲಗಳು ಸೂಚಿಸಿವೆ. ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ, ತೆಲಂಗಾಣ, ರಾಜಸ್ಥಾನ, ಜಾರ್ಖಂಡ್, ಯುಪಿ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪಕ್ಷದ ಮುಖ್ಯಸ್ಥರ ಆಯ್ಕೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT