ಜೈರಾಮ್ ರಮೇಶ್ 
ದೇಶ

ಮಣಿಪುರದಲ್ಲಿ 'ಗರಿಷ್ಠ ಮೌನ, ಕನಿಷ್ಠ ಆಡಳಿತ': ಮೋದಿ ವರ್ತನೆ ಆಘಾತಕಾರಿ ಎಂದ ಕಾಂಗ್ರೆಸ್

ಕಳೆದ 50 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ ಎಂದ ಕಾಂಗ್ರೆಸ್, ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಹಿಂಸಾಚಾರ ಪೀಡಿತ ರಾಜ್ಯವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಕರ್ತವ್ಯ...

ನವದೆಹಲಿ: ಕಳೆದ 50 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ ಎಂದ ಕಾಂಗ್ರೆಸ್, ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಹಿಂಸಾಚಾರ ಪೀಡಿತ ರಾಜ್ಯವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ "ಸಂಪೂರ್ಣವಾಗಿ ವಿಫಲರಾಗಿದ್ದಾರೆ" ಎಂದು ಬುಧವಾರ ಆರೋಪಿಸಿದೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು "ಗರಿಷ್ಠ ಮೌನ, ಕನಿಷ್ಠ ಆಡಳಿತ" ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

"ಪ್ರಧಾನಿ ಅವರ ಅಮೆರಿಕ ಭೇಟಿಯ ಎಲ್ಲಾ ಸುದ್ದಿಗಳ ನಡುವೆ ಇಂದು ಮಣಿಪುರದ ನೋವು, ಸಂಕಟ ಮತ್ತು ಹಿಂಸಾಚಾರ 50ನೇ ದಿನಕ್ಕೆ ಕಾಲಿಟ್ಟಿದೆ ಎಂಬುದನ್ನು ನಾವು ನೆನಪಿಸಿಕೊಳ್ಳೋಣ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಹಲವು ವಿಷಯಗಳ ಬಗ್ಗೆ ‘ಬುದ್ಧಿ’ ಹೇಳುವ ಪ್ರಧಾನಿ ಮೋದಿ, ದುಃಖದಿಂದ ಆವರಿಸಿರುವ ರಾಜ್ಯದ ಬಗ್ಗೆ ಒಂದು ಮಾತನ್ನೂ ಹೇಳಿಲ್ಲ. ಸಮಯ ಕೇಳಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಪಾಯಿಂಟ್‌ಮೆಂಟ್ ನೀಡಿಲ್ಲ ಮತ್ತು ಯಾವುದೇ ಸೂಚನೆ ಸಹ ನೀಡಿಲ್ಲ. ಅವರು ಮಣಿಪುರದ ಕಾಳಜಿ ವಹಿಸುತ್ತಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಯಾವುದೇ ಸೂಚನೆ ನೀಡುತ್ತಿಲ್ಲ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

"ಬಿಕ್ಕಟ್ಟಿನ ಸಮಯದಲ್ಲಿ ಮಣಿಪುರವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವ ಮೂಲಕ ಅವರು ಭಾರತದ ಪ್ರಧಾನಿ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅವರ ನಡವಳಿಕೆಯು ಅತ್ಯಂತ ಆಘಾತಕಾರಿ ಮತ್ತು ಗ್ರಹಿಕೆಗೆ ಮೀರಿದೆ" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT