ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಕಾರು 
ದೇಶ

ಉತ್ತರಾಖಂಡ: 600 ಅಡಿ ಆಳದ ಕಮರಿಗೆ ಬಿದ್ದ ಕಾರು, ಚಾಲಕ ಸೇರಿ ಎಲ್ಲಾ 10 ಮಂದಿ ದುರ್ಮರಣ

ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ 10 ಮಂದಿಯಿದ್ದ ವಾಹನ ಮುನ್ಸಿಯಾರಿಯಲ್ಲಿ ಗುರುವಾರ 600 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಥೋರಗಢ: ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ 10 ಮಂದಿಯಿದ್ದ ವಾಹನ ಮುನ್ಸಿಯಾರಿಯಲ್ಲಿ ಗುರುವಾರ 600 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಟ್ವೀಟ್‌ನಲ್ಲಿ, ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೊಲೆರೊದಲ್ಲಿ ಚಾಲಕ ಸೇರಿದಂತೆ 10 ಜನರಿದ್ದು, ಯಾರೊಬ್ಬರೂ ಬದುಕುಳಿದಿಲ್ಲ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪಿಥೋರಗಢ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಭೂಪೇಂದ್ರ ಸಿಂಗ್ ಮಹಾರ್ ತಿಳಿಸಿದ್ದಾರೆ.

ಸಂತ್ರಸ್ತರಲ್ಲಿ ನಿಶಾ ಸಿಂಗ್ (24) ಮತ್ತು ಉಮ್ಮದ್ ಸಿಂಗ್ (28) ಎಂಬ ದಂಪತಿಯಿದ್ದಾರೆ. ಇತರರನ್ನು ಕಿಶನ್ ಸಿಂಗ್ (65), ಧರ್ಮ ಸಿಂಗ್ (69), ಕುಂದನ್ ಸಿಂಗ್ (58), ಶಂಕರ್ ಸಿಂಗ್ (40), ಸುಂದರ್ ಸಿಂಗ್ (37), ಖುಶಾಲ್ ಸಿಂಗ್ (64), ಡಾನ್ ಸಿಂಗ್ ಮತ್ತು ವಾಹನ ಚಾಲಕ ಮಹೇಶ್ ಸಿಂಗ್ (40) ಎಂದು ಗುರುತಿಸಲಾಗಿದೆ.

ಸಂತ್ರಸ್ತರಲ್ಲಿ ಏಳು ಮಂದಿ ಸಾಮಾ ಗ್ರಾಮದವರು ಮತ್ತು ಮೂವರು ಬಾಗೇಶ್ವರ ಜಿಲ್ಲೆಯ ಕಾಪ್‌ಕೋಟ್ ಉಪ ವಿಭಾಗದ ಭನಾರ್ ಗ್ರಾಮದವರು ಎಂದು ಮಹಾರ್ ಹೇಳಿದರು.

ಯಾತ್ರಿಕರು ಹೊಕ್ರಾದಲ್ಲಿರುವ ಕೋಕಿಲಾ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಬೆಳಗ್ಗೆ 7.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ದಿದಿಹತ್ ಎಸ್‌ಡಿಎಂ ಅನಿಲ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಕೆಲವು ಸ್ಥಳೀಯ ನಿವಾಸಿಗಳು ಕಾರು ಕಮರಿಗೆ ಬೀಳುವುದನ್ನು ನೋಡಿದ್ದಾರೆ ಮತ್ತು ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಇತರೆ ಅವಶೇಷಗಳು ರಸ್ತೆಗೆ ಬಿದ್ದಿದ್ದವು. ಇದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೊಕ್ರಾ ಗ್ರಾಮದ ನಿವಾಸಿ ಸುಂದರ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT