ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಮೀಸಲು ಕೋಟಾದಲ್ಲಿ ನಕಲಿ ದಾಖಲೆ ಕೊಟ್ಟು ಉದ್ಯೋಗ ಗಿಟ್ಟಿಸಿಕೊಂಡಿದ್ದ 77 ಶಿಕ್ಷಕರ ವಿರುದ್ಧ ಕೇಸ್ ದಾಖಲು

ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಶಿಕ್ಷಕರ ಹುದ್ದೆ ಪಡೆದಿದ್ದ 77 ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ. 

ಭೋಪಾಲ್: ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಶಿಕ್ಷಕರ ಹುದ್ದೆ ಪಡೆದಿದ್ದ 77 ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ. 

ಈ ಅಕ್ರಮ ಬಹಿರಂಗಗೊಂಡ ಬೆನ್ನಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳ ನಿದ್ದೆ ಹಾರಿಹೋಗಿದೆ. ಕಾರಣ ಶಿಕ್ಷಕರ ನಂತರ ಈಗ ಇಲಾಖಾ ಅಧಿಕಾರಿಗಳ ವಿರುದ್ಧ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲು ಹೊರಟಿದೆ.

ಮಧ್ಯಪ್ರದೇಶದ ಮೊರೆನಾದಲ್ಲಿ 77 ನಕಲಿ ಶಿಕ್ಷಕರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ನಕಲಿ ಅಂಗವಿಕಲ ಪ್ರಮಾಣಪತ್ರದ ಆಧಾರದ ಮೇಲೆ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಬಗ್ಗೆ ಯಾವುದೇ ದಾಖಲೆ ಸಿಕ್ಕಿಲ್ಲ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ವ್ಯಾಪಂ ಹಗರಣದ ಬಿಸಿ ಸರಿಯಾಗಿ ತಣ್ಣಗಾಗದೆ ಈಗ ಶಿಕ್ಷಕರ ನೇಮಕಾತಿ ಹಗರಣ ಸರ್ಕಾರಕ್ಕೆ ತಲೆಬಿಸಿ ಹೆಚ್ಚಿಸಿದೆ. ಈ ದೊಡ್ಡ ಹಗರಣದಲ್ಲಿ ಚಂಬಲ್ ವಿಭಾಗ ಇಡೀ ಮಧ್ಯಪ್ರದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 450 ಅಭ್ಯರ್ಥಿಗಳು ನಕಲಿ ಅಂಗವಿಕಲ ಪ್ರಮಾಣಪತ್ರದ ಸಹಾಯದಿಂದ ಕಾಯ್ದಿರಿಸಿದ ಕೋಟಾದಲ್ಲಿ ಉದ್ಯೋಗ ಪಡೆದಿದ್ದಾರೆ. ಈ ವಿಷಯ ಮೊರೆನಾ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ತನಿಖೆ ನಡೆಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿ ಎ.ಕೆ.ಪಾಠಕ್ ಅವರಿಗೆ ಸೂಚಿಸಿದರು.

ಆರಂಭದಲ್ಲಿ ತನಿಖೆಯ ವೇಳೆ 5 ಶಿಕ್ಷಕರ ಪ್ರಮಾಣಪತ್ರಗಳು ನಕಲಿ ಎಂದು ಕಂಡುಬಂದಿತ್ತು. ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡ ಜಿಲ್ಲಾ ಶಿಕ್ಷಣಾಧಿಕಾರಿ ಮೂವರು ಶಿಕ್ಷಕರನ್ನು ವಜಾಗೊಳಿಸಿದ್ದರು. ಇದಾದ ಬಳಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಒಂದೊಂದಾಗಿ ಇತರೆ ಕಡತಗಳನ್ನು ಪರಿಶೀಲಿಸ ತೊಡಗಿದಾಗ 77 ಶಿಕ್ಷಕರ ವಿಕಲಚೇತನ ಪ್ರಮಾಣ ಪತ್ರ ನಕಲಿ ಎಂಬುದು ಪತ್ತೆಯಾಗಿದೆ. ಅವರ ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದೇ ದಾಖಲೆ ಸಿಕ್ಕಿಲ್ಲ.

ಜಿಲ್ಲಾ ಶಿಕ್ಷಣಾಧಿಕಾರಿಗಳ ದೂರಿನ ಮೇರೆಗೆ 77 ನಕಲಿ ಶಿಕ್ಷಕರ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಪೂರ್ಣ ಫೋರ್ಜರಿ ಅಧಿಕಾರಿಗಳ ಕುಮ್ಮಕ್ಕಿನಿಂದ ನಡೆದಿದೆ ಎನ್ನಲಾಗಿದೆ. ಈ ಕಾರಣಕ್ಕೆ ಸೇರುವ ಸಂದರ್ಭದಲ್ಲಿ ಅಧಿಕಾರಿಗಳು ಮೂಲ ದಾಖಲೆಗಳನ್ನು ಪರಿಶೀಲಿಸಿರಲಿಲ್ಲ ಎಂದು ಆರೋಪಿಸಲಾಗಿದೆ.

ಪ್ರಕರಣದಲ್ಲಿ, ಯಾರ ನಕಲಿ ದಿವ್ಯಾಂಗ್ ಪ್ರಮಾಣಪತ್ರಗಳಿಗೆ ಸಹಿ ಹಾಕಲಾಗಿದೆ ಅಥವಾ ಸೀಲ್ ಮಾಡಲಾಗಿದೆ ಎಂದು ಆ ವೈದ್ಯರನ್ನೂ ಅನುಮಾನಕ್ಕೆ ಒಳಪಡಿಸಲಾಗುತ್ತಿದೆ. ಇದರೊಂದಿಗೆ ಈ ನಕಲಿ ದಿವ್ಯಾಂಗ್ ಸರ್ಟಿಫಿಕೇಟ್‌ಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಹೇಗೆ ತಯಾರಾದವು ಎಂಬ ಪ್ರಶ್ನೆಯೂ ಈ ವಿಚಾರದಲ್ಲಿ ಎದ್ದಿದ್ದು, ಈ ಬಗ್ಗೆಯೂ ತನಿಖೆ ನಡೆಸುವುದು ಬಹಳ ಮುಖ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

SCROLL FOR NEXT