ಎಎಪಿ ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರದ ಸುಗ್ರೀವಾಜ್ಞೆ: ಕಾಂಗ್ರೆಸ್ ಬೆಂಬಲದ ಭರವಸೆ ನೀಡದಿದ್ದಲ್ಲಿ ವಿಪಕ್ಷಗಳ ಸಭೆಯಿಂದ ಎಎಪಿ ಹೊರಕ್ಕೆ- ಮೂಲಗಳು

ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಶುಕ್ರವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಯಿಂದ ಎಎಪಿ ಹೊರನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಶುಕ್ರವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಯಿಂದ ಎಎಪಿ ಹೊರನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಎಎಪಿ ಸಭೆಯಿಂದ ಹೊರನಡೆಯಲಿದೆ ಎಂದು ಮೂಲವೊಂದು ಗುರುವಾರ ತಿಳಿಸಿದೆ.

ಮಂಗಳವಾರ ಪಾಟ್ನಾದಲ್ಲಿ ನಡೆದ ಬಿಜೆಪಿಯೇತರ ಪಕ್ಷಗಳ ಸಭೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT