ಅಮಿತ್ ಶಾ 
ದೇಶ

ಮಣಿಪುರ: ಹಿಂಸಾಚಾರ ಭುಗಿಲೆದ್ದ 50 ದಿನಗಳ ನಂತರ ಜೂನ್ 24ರಂದು ಸರ್ವಪಕ್ಷ ಸಭೆ ಕರೆದ ಅಮಿತ್ ಶಾ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಟ್ವೀಟ್ ಮಾಡಿದೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಮತ್ತು 50,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಬುಧವಾರ ತಡರಾತ್ರಿ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಸರ್ವಪಕ್ಷ ಸಭೆಯನ್ನು ಘೋಷಿಸಲಾಯಿತು.

ಗೃಹ ಸಚಿವರು ಮೇ 29 ರಿಂದ ಜೂನ್ 1 ರವರೆಗೆ ಮಣಿಪುರಕ್ಕೆ ಭೇಟಿ ನೀಡಿದ್ದರು ಮತ್ತು ಕುಕಿ ಮತ್ತು ಮೈತೆಯ್ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದರು. ಶಾಂತಿ ಸ್ಥಾಪನೆಗಾಗಿ ಮನವಿ ಮಾಡಿದರೂ, ರಾಜ್ಯದಲ್ಲಿ ಹಿಂಸಾಚಾರ ಮುಂದುವರಿದಾಗ ಎರಡು ಗುಂಪುಗಳೊಂದಿಗೆ ಮಾತುಕತೆ ನಡೆಸುವಂತೆ ಶಾ ಅವರು ಮುಖ್ಯಮಂತ್ರಿಗೆ ತಿಳಿಸಿದರು.

ಮಣಿಪುರದ ಹಲವಾರು ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಲ್ಲಿ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಮೋದಿ ಅವರು ಜೂನ್ 21-26 ರವರೆಗೆ ಅಮೆರಿಕ ಮತ್ತು ಈಜಿಪ್ಟ್‌ ಭೇಟಿಯಲ್ಲಿದ್ದಾರೆ. ಮೈಟೈ ಶಾಸಕರನ್ನು ಒಳಗೊಂಡ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮಣಿಪುರದ ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರ ಅವರನ್ನು ಭೇಟಿ ಮಾಡಿತು.
ಸ್ಫೋಟದಲ್ಲಿ ಮೂವರಿಗೆ ಗಾಯ

ಬುಧವಾರ ಸಂಜೆ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಬಳಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಮಧ್ಯೆ, ಹಿಂಸಾಚಾರದಿಂದ ನಿರಾಶ್ರಿತರಾದ 11,785 ಜನರಿಗೆ ಪರಿಹಾರ ನೀಡಲು ಮಿಜೋರಾಂ ಸರ್ಕಾರವು ಕೇಂದ್ರದಿಂದ ₹ 10 ಕೋಟಿ ರೂ. ಕೇಳಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ಅವರು ಮೇ 16 ಮತ್ತು ಮೇ 23 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಣ ಕೋರಿ ಪತ್ರ ಬರೆದಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT